Home ಟಾಪ್ ಸುದ್ದಿಗಳು BSP ಅಧ್ಯಕ್ಷನ ಹತ್ಯೆ; ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ: ರಾಹುಲ್ ಗಾಂಧಿ

BSP ಅಧ್ಯಕ್ಷನ ಹತ್ಯೆ; ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ: ರಾಹುಲ್ ಗಾಂಧಿ

ನವದೆಹಲಿ: ತಮಿಳುನಾಡು ಬಿಎಸ್ ಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅರ್ಮ್ ಸ್ಟ್ರಾಂಗ್ ಅವರ ಹತ್ಯೆಯನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ.


ಅರ್ಮ್ ಸ್ಟ್ರಾಂಗ್ ಹತ್ಯೆ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ತಮಿಳುನಾಡಿನ ಬಹುಜನ ಸಮಾಜ ಪಕ್ಷದ ಅಧ್ಯಕ್ಷ ಅರ್ಮ್ ಸ್ಟ್ರಾಂಗ್ ಅವರ ಕ್ರೂರ ಮತ್ತು ಅಸಹ್ಯಕರ ಹತ್ಯೆ ಸುದ್ದಿ ತಿಳಿದು ಆಘಾತಕ್ಕೊಳಗಾಗಿದ್ದೇನೆ. ಅವರ ಕುಟುಂಬಸ್ಥರು ಮತ್ತು ಬೆಂಬಲಗರಿಗೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.


‘ಕಾಂಗ್ರೆಸ್ ನಾಯಕರು ಡಿಎಂಕೆ ನೇತೃತ್ವದ ತಮಿಳುನಾಡಿನ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಹತ್ಯೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸಿ, ಶಿಕ್ಷೆಗೆ ಒಳಪಡಿಸುತ್ತಾರೆ ಎಂಬ ವಿಶ್ವಾಸ ನನಗಿದೆ’ ಎಂದು ರಾಹುಲ್ ಹೇಳಿದ್ದಾರೆ.

Join Whatsapp
Exit mobile version