Home ಟಾಪ್ ಸುದ್ದಿಗಳು ಉಪರಾಷ್ಟ್ರಪತಿ ಚುನಾವಣೆ: NDA ಅಭ್ಯರ್ಥಿ ಧನಕರ್’ಗೆ ಬೆಂಬಲ: ಮಾಯಾವತಿ

ಉಪರಾಷ್ಟ್ರಪತಿ ಚುನಾವಣೆ: NDA ಅಭ್ಯರ್ಥಿ ಧನಕರ್’ಗೆ ಬೆಂಬಲ: ಮಾಯಾವತಿ

ಲಖನೌ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ NDA ಅಭ್ಯರ್ಥಿ ಜಗದೀಪ್ ಧನಕರ್ ಅವರನ್ನು ಬೆಂಬಲಿಸುವುದಾಗಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಾರ್ವಜನಿಕ ಹಿತಾಸಕ್ತಿ ಮತ್ತು ಪಕ್ಷದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಈ ನಿರ್ಧಾರ ತೆಗೆದಿದೆ. ಈ ಬಗ್ಗೆ ನಾನು ಅಧಿಕೃತವಾಗಿ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆ ಆಗಸ್ಟ್ 6 ರಂದು ನಡೆಯಲಿದ್ದು, ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10 ರಂದು ಮುಗಿಯಲಿದೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ NDA ಅಭ್ಯರ್ಥಿಯಾಗಿ ಜನದೀಪ್ ಧನಕರ್ ಕಣಕ್ಕಿಳಿದರೆ, ವಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ನಾಮಪತ್ರ ಸಲ್ಲಿಸಿದ್ದಾರೆ.

ವಕೀಲರಾಗಿರುವ ಧನಕರ್ ಅವರು 1989 ರಲ್ಲಿ ಸಕ್ರಿಯ ರಾಜಕೀಯ ಪ್ರವೇಶಿಸಿದ್ದು, 2019ರಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದರು.

Join Whatsapp
Exit mobile version