ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ನಾಳೆ ಕೇಂದ್ರ ಬಜೆಟ್ ಮಂಡನೆ

Prasthutha|

ನವದೆಹಲಿ: ಆಡಳಿತಾರೂಢ ಎನ್ ಡಿಎ ಮತ್ತು ಪ್ರಬಲ ವಿಪಕ್ಷ ಇಂಡಿಯಾ ಮೈತ್ರಿಕೂಟದ ನಡುವಿನ ಜಿದ್ದಾಜಿದ್ದಿಗೆ ವೇದಿಕೆಯಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದೆ.

- Advertisement -


ಇಂದಿನಿಂದ (ಜು.22) ಆ.12ರ ವರೆಗೆ ಅಧಿವೇಶನ ನಡೆಯಲಿದೆ. ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮೀಕ್ಷಾ ವರದಿ ಮಂಡಿಸಲಿದ್ದಾರೆ.
ನಿರ್ಮಲಾ ಸೀತಾರಾಮನ್ ಮಂಗಳವಾರದಂದು ಸತತ 7ನೇ ಬಾರಿಗೆ ಆಯವ್ಯಯ ಮಂಡಿಸಲಿದ್ದಾರೆ.

ಈ ಬಜೆಟ್ ಮಂಡನೆ ಮೂಲಕ ಅವರು ಹೊಸ ದಾಖಲೆ ಬರೆಯಲಿದ್ದಾರೆ. ಹಣಕಾಸು ಸಚಿವರಾಗಿ ಸತತ 6 ಬಜೆಟ್ ಮಂಡಿಸಿದ್ದ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ಸಾಧನೆಯನ್ನ ನಿರ್ಮಲಾ ಸೀತಾರಾಮನ್ ಹಿಂದಿಕ್ಕಲಿದ್ದಾರೆ.



Join Whatsapp