ತಡರಾತ್ರಿ ವೇಳೆ ನದಿಗೆ ಉರುಳಿದ ಬಸ್ | 6 ಪ್ರಯಾಣಿಕರ ದಾರುಣ ಸಾವು

Prasthutha|

ಮೆಘಾಲಯ: 21 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ವೊಂದು ಶಿಲ್ಲಾಂಗ್ ಸಮೀಪದ ರಿಂಗ್ಢಿ ನದಿಗೆ ಉರುಳಿ ಬಿದ್ದಿದ್ದು 6 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಉಳಿದಂತೆ 16 ಮಂದಿ ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

ಬುಧವಾರ ತಡರಾತ್ರಿ 12ರ ವೇಳೆ ಬಸ್ ನದಿಗೆ ಉರುಳಿ ಬಿದ್ದಿದ್ದು, ಮಾಹಿತಿ ಪಡೆದ ಪೊಲೀಸರು, ರಕ್ಷಣಾ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ಧಾವಿಸಿದ್ದು 16 ಜನರನ್ನು ರಕ್ಷಿಸಿದ್ದಾರೆ, ದುರದೃಷ್ಟವಶಾತ್ 6 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬಸ್ ಚಾಲಕ ಸೇರಿದಂತೆ 6 ಜನರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ರಕ್ಷಿಸಲ್ಪಟ್ಟ ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Join Whatsapp