ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್

Prasthutha|

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಸರ್ಕಾರಿ ಬಸ್ ವೊಂದು ಡಿಕ್ಕಿಯಾದ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸಮೀಪದ ಕುಂಬಾರಗಡಿಗೆ ಎಂಬಲ್ಲಿ ನಡೆದಿದೆ.

- Advertisement -

ಕೆಎಸ್ ಆರ್ ಟಿಸಿ ಬಸ್ ಮಡಿಕೇರಿಯಿಂದ ಸೂರ್ಲಬ್ಬಿ ಮಾರ್ಗವಾಗಿ ಸೋಮವಾರಪೇಟೆಗೆ ತೆರಳುತ್ತಿತ್ತು. ಕುಂಬಾರಗಡಿ ಸಮೀಪ ಬರುತ್ತಿದ್ದಾಗ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ.

Join Whatsapp