ಕರ್ನಾಟಕ-ಕೇರಳ ಬಸ್ ಸಂಚಾರ ಆರಂಭ

Prasthutha|

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕರ್ನಾಟಕ ಮತ್ತು ಕೇರಳ ನಡುವಣ ಬಸ್ ಸಂಚಾರ ಇಂದಿನಿಂದ ಮತ್ತೆ ಆರಂಭವಾಗಿದೆ.

- Advertisement -


ಮೈಸೂರಿನಿಂದ ಕೇರಳ ರಾಜ್ಯಕ್ಕೆ ಬಸ್ ಸಂಚಾರ ಮುಂದುವರೆದಿದ್ದು, ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಎಂದು ಸೂಚಿಸಲಾಗಿದೆ.


ರಾಜ್ಯಕ್ಕೆ ಪ್ರಯಾಣಿಸುವ ಪ್ರಯಾಣಿಕರು ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕೆಂಬ ನಿಯಮವನ್ನು ಜಾರಿ ಮಾಡಲಾಗಿದೆ. ಹಾಗೆಯೇ ಬಸ್ಸಿನ ಚಾಲಕರು ಹಾಗೂ ನಿರ್ವಾಹಕರು ಕೋವಿಡ್ ತಪಾಸಣೆ ಜೊತೆಗೆ ಲಸಿಕೆ ಕೂಡ ಹಾಕಿಸಿಕೊಂಡಿರಬೇಕು ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ.

Join Whatsapp