Home ಟಾಪ್ ಸುದ್ದಿಗಳು ಉದ್ಯಮಿ ಜಯ ಶೆಟ್ಟಿ ಕೊಲೆ ಕೇಸ್: ಗ್ಯಾಂಗ್ ಸ್ಟರ್ ಚೋಟಾ ರಾಜನ್ ಗೆ ಜಾಮೀನು

ಉದ್ಯಮಿ ಜಯ ಶೆಟ್ಟಿ ಕೊಲೆ ಕೇಸ್: ಗ್ಯಾಂಗ್ ಸ್ಟರ್ ಚೋಟಾ ರಾಜನ್ ಗೆ ಜಾಮೀನು

ಮುಂಬೈ: ಹೋಟೆಲ್ ಉದ್ಯಮಿ ಜಯ ಶೆಟ್ಟಿ ಅವರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಗ್ಯಾಂಗ್ ಸ್ಟರ್ ಚೋಟಾ ರಾಜನ್ ಗೆ ಬಾಂಬೆ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.


ನ್ಯಾಯಮೂರ್ತಿ ರೇವತಿ ಮೋಹಿತೆ ದೆರೆ ಹಾಗೂ ನ್ಯಾ. ಪೃಥ್ವಿರಾಜ್ ಚವಾಣ್ ಅವರಿದ್ದ ವಿಭಾಗೀಯ ಪೀಠ ₹ 1 ಲಕ್ಷ ಬಾಂಡ್ ಮೇಲೆ ಜಾಮೀನು ನೀಡಿದೆ.


ಕೇಂದ್ರ ಮುಂಬೈನ ಗಾಮ್ ದೇವಿಯಲ್ಲಿ ಗೋಲ್ಡನ್ ಕ್ರೌನ್ ಹೋಟೆಲ್ ಹೊಂದಿದ್ದ ಜಯ ಶೆಟ್ಟಿ ಅವರನ್ನು ಹೋಟೆಲ್ ನ ಮೊದಲ ಮಹಡಿಯಲ್ಲಿ 2001ರ ಮೇ 4ರಂದು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಶೆಟ್ಟಿ ಅವರಿಂದ ಸುಲಿಗೆ ಮಾಡಲು ರಾಜನ್ ಗ್ಯಾಂಗ್ ನ ಹೇಮಂತ್ ಪೂಜಾರಿ ಕರೆ ಮಾಡುತ್ತಿದ್ದ. ಆದರೆ, ಹಣ ನೀಡದ್ದಕ್ಕೆ ಶೆಟ್ಟಿ ಅವರನ್ನು ಕೊಲೆ ಮಾಡಲಾಗಿದೆ ಎಂಬುದು ತನಿಖೆಯಿಂದ ಬಹಿರಂಗವಾಗಿತ್ತು. ಈ ಪ್ರಕರಣದಲ್ಲಿ ರಾಜನ್ ಗೆ ಇದೇ ವರ್ಷ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

Join Whatsapp
Exit mobile version