ಸಿ.ಎಂ ಇಬ್ರಾಹಿಂ ನನ್ನ ಆತ್ಮೀಯ ಸ್ನೇಹಿತರು, ಯಾವಾಗ ಜ್ಞಾನೋದಯ ಆಗುತ್ತೋ ಗೊತ್ತಿಲ್ಲ | ಸಿ.ಎಂ ಬೊಮ್ಮಾಯಿ

Prasthutha|

ಬೆಂಗಳೂರು : ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ನನ್ನ ಆತ್ಮೀಯ ಸ್ನೇಹಿತರು,ಅವರಿಗೆ ಯಾವಾಗ ಜ್ಞಾನೋದಯ ಆಗುತ್ತದೆ ಎನ್ನುವುದು ಅವರಿಗೇ ಗೊತ್ತಿಲ್ಲ. ಅವರ ಜೊತೆ ನಾನು ಮಾತನಾಡುತ್ತೇನೆ’ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಶನಿವಾರ ಹೇಳಿಕೆ ನೀಡಿದ್ದಾರೆ.ದಾವಣಗೆರೆಯ ಹೊನ್ನಾಳಿಯ ಸುರಹೊನ್ನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಟಿಪ್ಪು ಜಯಂತಿ ಬಗ್ಗೆ ಹೇಳಿಕೆ ನೀಡಿದ್ದ ಮತ್ತು ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರ ಸ್ಥಾನಮಾನದ ಬಗ್ಗೆ ಪ್ರಶ್ನಿಸಿದ್ದ ಸಿ.ಎಂ. ಇಬ್ರಾಹಿಂ ಅವರ ಕುರಿತು ಪ್ರತಿಕ್ರಿಯಿಸಿ ‘ಅವರ ಜೊತೆ ನಾನು ಮಾತಾಡುತ್ತೇನೆ. ಟಿಪ್ಪು ಜಯಂತಿ ಬಗ್ಗೆ ಕಾಂಗ್ರೆಸ್ ನವರಿಗೆ ಸಿ.ಎಂ. ಇಬ್ರಾಹಿಂ ಅವರೇ ಉತ್ತರ ಕೊಟ್ಟಿದ್ದಾರೆ’ ಎಂದರು.

- Advertisement -

‘ಸಿದ್ದರಾಮಯ್ಯ ಕುರಿತಾಗಿ ಏನೂ ಹೇಳುವುದಿಲ್ಲ. ಅವರು ದೊಡ್ಡವರು. ಟಿಪ್ಪು ಜಯಂತಿ ಆಚರಿಸಿದ್ದು ರಾಜಕೀಯಕ್ಕಾಗಿ, ನಾನು ಅಂದೇ ಜಯಂತಿ ವಿರೋಧಿಸಿದ್ದೆ . ಜಯಂತಿ ಆಚರಣೆ, ಫೋಟೊಗೆ ಹಾರ ಹಾಕಿ ಪೂಜೆ ಮಾಡುವ ಪದ್ಧತಿ ನಮ್ಮದಲ್ಲ’ ಎಂದು ಸಿ.ಎಂ. ಇಬ್ರಾಹಿಂ ಹೇಳಿಕೆ ನೀಡಿದ್ದರು.

Join Whatsapp