ರೈಲು ನಿಲ್ದಾಣಗಳ ಆಧುನೀಕರಣಕ್ಕೆ ಸಂಪುಟ ಅನುಮೋದನೆ

Prasthutha|

ಬೆಂಗಳೂರು: ಬೆಂಗಳೂರಿನ ಕ್ರಾಂತಿವೀರ ಸಂಗಳ್ಳಿ ರಾಯಣ್ಣ ನಿಲ್ದಾಣ, ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ ರೈಲ್ವೆ ನಿಲ್ದಾಣಗಳ ಆಧುನೀಕರಣಕ್ಕೆ ಕೇಂದ್ರ ಸಂಪುಟ ಅನುಮತಿ ನೀಡಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

- Advertisement -

ದೇಶದ 199 ರೈಲ್ವೆ ನಿಲ್ದಾಣಗಳನ್ನು ಆಧುನೀಕರಣಗೊಳಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈಗಾಗಲೇ ಬೆಂಗಳೂರಿನ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ಮೂಲಸೌಕರ್ಯಗಳನ್ನು ಕಲ್ಪಿಸಿದ್ದು, ಬೆಂಗಳೂರಿನ ದಂಡು, ಯಶವಂತಪುರ ನಿಲ್ದಾಣಗಳ ಆಧುನೀಕರಣಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.

- Advertisement -

ಈ ರೈಲ್ವೆ ನಿಲ್ದಾಣಗಳಲ್ಲಿ ಅತ್ಯಾಧುನಿಕ ಫುಡ್ ಕೋರ್ಟ್, ವಿಶ್ರಾಂತಿ ಕೊಠಡಿ, ಮಕ್ಕಳು ಆಡವಾಡಲು ಪ್ರತ್ಯೇಕ ಸ್ಥಳ ನಿಗದಿ, ಶೌಚಾಲಯ, ಶುದ್ಧ ಕುಡಿಯುವ ನೀರು ಮತ್ತು ನಿಲ್ದಾಣದಲ್ಲಿ ಮಕ್ಕಳ ಮತ್ತು ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Join Whatsapp