ಸಂಪುಟ ರಚನೆ: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ, ರಾಜೀನಾಮೆಗೆ ಮುಂದಾದ ಮಾಮನಿ

Prasthutha|

ಬೆಂಗಳೂರು, ಆ.4: ಸಂಪುಟ ರಚನೆಗೆ ಬಿಜೆಪಿ ವರಿಷ್ಠರಿಂದ ಮುಹೂರ್ತ ನಿಗದಿಯಾಗುತ್ತಿದ್ದಂತೆ ಬಿಜೆಪಿಯಲ್ಲಿ ಬಂಡಾಯ ಭುಗಿಲೆದ್ದಿದೆ.

- Advertisement -

ಬಿಜೆಪಿ ಶಾಸಕ, ವಿಧಾನಸಭೆಯ ಉಪಾಧ್ಯಕ್ಷ ಆನಂದ ಮಾಮನಿ ಸಚಿವ ಸ್ಥಾನ ದೊರೆಯುವ ಲಕ್ಷಣಗಳು ಕಾಣಿಸದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಆನಂದ ಮಾಮನಿ ಅವರು, ನನಗೆ ಸಚಿವ ಸ್ಥಾನ ನೀಡುವ ಭರವಸೆ ಇದೆ, ನೀಡದಿದ್ದರೆ ಇಂದೇ ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

  ಈಗ ಕ್ಯಾಬಿನೆಟ್ ರಚನೆ ಕೊನೆಗೂ ತಾರ್ಕಿಕ ಅಂತ್ಯಕ್ಕೆ ಬಂದರೂ ಇನ್ನೂ ಫೋನ್ ಕರೆ ಬಾರದ ಹಿನ್ನೆಲೆಯಲ್ಲಿ ರಾಜೀನಾಮೆ ಘೋಷಣೆ ಮಾಡುವುದಾಗಿ ಮಾಮನಿ ಹೇಳಿದ್ದಾರೆ. ಸಚಿವರ ಪಟ್ಟಿಗೆ ಅಂಕಿತ ಪಡೆಯಲು ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಪ್ರದಕ್ಷಿಣೆ ಹಾಕುತ್ತಿದ್ದ ಬೊಮ್ಮಾಯಿ ಅವರು ಇಂದು ಬೆಳಗ್ಗೆ ಬೆಂಗಳೂರಿಗೆ ಬಂದಿದ್ದಾರೆ. ಸದ್ಯ ಮಂತ್ರಿಗಿರಿ ಪಟ್ಟಿಗೆ ಬಿಜೆಪಿ ಹೈಕಮಾಂಡ್ ನಾಯಕರ ಮುದ್ರೆ ಬಿದ್ದಿದೆ. ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕಗ್ಗಂಟಾಗುವ ಲಕ್ಷಣಗಳನ್ನು ತೋರುತ್ತಿದೆ.

ಹಾವೇರಿಯಲ್ಲಿ ನೆಹರೂ ಓಲೆಕಾರ್ ಬೆಂಬಲಿಗರು ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಮಧ್ಯಾಹ್ನ 2.30ಕ್ಕೆ ರಾಜಭವನದಲ್ಲಿ ಪ್ರಮಾಣ ವಚನ ನಡೆಯಲಿದೆ.

Join Whatsapp