ಸುಪ್ರೀಂ ಕೋರ್ಟ್ ಆದೇಶ ಪಾಲನೆ ಜೊತೆಗೆ ರೈತರ ಹಿತರಕ್ಷಣೆಗೆ ಸಂಪುಟ ಸಭೆ ತೀರ್ಮಾನ: ಡಿ.ಕೆ.ಶಿವಕುಮಾರ್

Prasthutha|

ಬೆಂಗಳೂರು: ಕಾವೇರಿ ನದಿ ನೀರು ಬಿಡುಗಡೆ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ರೈತರ ಹಿತ ರಕ್ಷಣೆಯನ್ನೂ ಮಾಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

- Advertisement -


ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಕಾವೇರಿ ನದಿ ನೀರು ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ಆಗಿರುವ ವಿಚಾರಣೆಯನ್ನು ಎಎಜಿ ಸಂಪುಟ ಸಭೆಯಲ್ಲಿ ವಿವರಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಲಾಗುವುದು. ಸೆ.26ರವರೆಗೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗುವುದು. 8000 ಕ್ಯುಸೆಕ್ಸ್ ಒಳಹರಿವು ಇದೆ. ಈಗಾಗಲೇ 3,000-3,500 ಕ್ಯುಸೆಕ್ಸ್ ನೀರು ಹರಿದು ಹೋಗುತ್ತಿದೆ. ಸೆ.26 ತನಕ ನೀರು ಬಿಡಲಾಗುತ್ತದೆ. ನಾವು ರೈತರ ಹಿತರಕ್ಷಣೆಯನ್ನೂ ಮಾಡುತ್ತೇವೆ. ಕುಡಿಯುವ ನೀರಿನ ರಕ್ಷಣೆಯನ್ನು ಮಾಡುತ್ತೇವೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.



Join Whatsapp