ಮೇ 10ರೊಳಗೆ ಸಂಪುಟ ಪುನರ್ ರಚನೆ: ಬಿ ಎಸ್ ಯಡಿಯೂರಪ್ಪ

Prasthutha|

ಬೆಂಗಳೂರು: ಸದ್ಯ ರಾಜ್ಯದಲ್ಲಿ ಚರ್ಚೆಯಲ್ಲಿರುವ ಸಂಪುಟ ಪುನರ್ ರಚನೆಗೆ ಸಾಧ್ಯತೆ ಇದೆ. ರಾಜ್ಯ ಸಚಿವ ಸಂಪುಟ ಪುನರ್ ರಚನೆಯ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಮೇ 10ರೊಳಗೆ ಪುನಾರಚನೆ ನಡೆಯಲಿದೆ ಎಂದು ಹೇಳಿದ್ದಾರೆ. ಸಂಪುಟ ಪುನಾರಚನೆ ವಿಚಾರವಾಗಿ ದೆಹಲಿ ವರಿಷ್ಠರು ಕೈಗೊಳ್ಳುವ ತಿರ್ಮಾನಕ್ಕೆ ಬದ್ಧ ಎಂದು ಅವರು ಹೇಳಿದ್ದಾರೆ.

- Advertisement -

ಹೈಕಮಾಂಡ್‌ ಈ ಕುರಿತು ಕೈಗೊಳ್ಳುವ ನಿರ್ಧಾರವೇ ಅಂತಿಮವಾಗಿದೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿರುತ್ತೇವೆ. ಈ ವಿಚಾರವಾಗಿ ಕೇಂದ್ರ ನಾಯಕರ ತೀರ್ಮಾನವೇ ಇದರಲ್ಲಿ ಅಂತಿಮ ಎಂದು ಬಿಎಸ್ವೈ ಹೇಳಿದ್ದಾರೆ.

ಸಂಪುಟ ಪುನರ್ ರಚನೆ ಕುರಿತು ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿ, ಬಿಜೆಪಿ ಕೇಂದ್ರ ನಾಯಕತ್ವವು ಕರೆದ ತಕ್ಷಣ ರಾಜ್ಯ ಸಚಿವ ಸಂಪುಟದ ಬಗ್ಗೆ ಚರ್ಚಿಸಲು ನವದೆಹಲಿಗೆ ಹೋಗಲು ಸಿದ್ಧ ಎಂದು ಹೇಳಿದ್ದರು.. ಬಹಳ ಜನ ಪಕ್ಷಕ್ಕೆ ಇನ್ನೂ ಬರುವವರಿದ್ದಾರೆ. ನಮ್ಮ ಪಕ್ಷ ಇನ್ನಷ್ಟು ಬಲವಾಗಲಿದೆ ಎಂದು ಹೇಳಿದ್ದರು.

Join Whatsapp