ಮತಾಂತರ ನಿಷೇಧ ಮಸೂದೆ ವಿರುದ್ಧ ನಾಗರಿಕರ ಜಂಟಿ ಪ್ರತಿಭಟನೆಯಲ್ಲಿ ಕ್ಯಾಂಪಸ್ ಫ್ರಂಟ್ ಭಾಗಿ

Prasthutha|

ಬೆಂಗಳೂರು: ರಾಜ್ಯ ಸರ್ಕಾರವು ಜಾರಿಗೆ ತರಲು ಹೊರಟಿರುವ ವಿವಾದಿತ ಮತಾಂತರ ನಿಷೇಧ ಮಸೂದೆಯ ವಿರುದ್ಧ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಿಂದ ಫ್ರೀಡಂ ಪಾರ್ಕ್ ತನಕ ನಡೆದ ಪ್ರತಿಭಟನಾ ಮೆರವಣಿಗೆಗೆ ಕ್ಯಾಂಪಸ್ ಫ್ರಂಟ್ ಬೆಂಬಲ ಸೂಚಿಸಿದೆ.

- Advertisement -


ಕ್ಯಾಂಪಸ್ ಫ್ರಂಟ್ ರಾಜ್ಯ ಕಾರ್ಯದರ್ಶಿ ಸರ್ಫರಾಝ್ ಗಂಗಾವತಿ, ಜಿಲ್ಲಾ ಮುಖಂಡ ಮುಹೀನ್ ಹಾಗೂ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮಸೂದೆಯ ವಿರುಧ್ದ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಮತಾಂತರ ನಿಷೇಧ ಮಸೂದೆ ಸಂವಿಧಾನಕ್ಕೆ ವಿರುದ್ಧವಾದುದು ಎಂದು ಆರೋಪಿಸಿ ಬೆಂಗಳೂರಿನಲ್ಲಿ ಬುಧವಾರ ವಿವಿಧ ಸಂಘಟನೆಗಳ ಕಾರ್ಯಕರ್ತರು, ಸದಸ್ಯರು, ನಾಗರಿಕರು ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿದ ಪ್ರತಿಭಟನಕಾರರು ರಾಜಧಾನಿಯಲ್ಲಿ ಜಾಥಾ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.


ಈ ಮಸೂದೆಯು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಬಲವಂತದ ಮತಾಂತರ ತಡೆಯಲು ಈಗಾಗಲೇ ಹಲವು ಕಾನೂನು ಇವೆ. ಹೀಗಿರುವಾಗ ಹೊಸ ಮಸೂದೆಯ ಅಗತ್ಯವೇನಿದೆ. ‘ತಮಗೆ ಬೇಕಾದ ಧರ್ಮ ಆಚರಿಸಿ ಮತ್ತು ಧರ್ಮ ಪ್ರಚಾರ ಮಾಡಬಹುದು ಎಂದು ಸಂವಿಧಾನದ 25ನೇ ವಿಧಿ ಹೇಳುತ್ತದೆ. ಎಲ್ಲ ಪಂಗಡಗಳು ಧರ್ಮದ ವಿಚಾರದಲ್ಲಿ ತಮ್ಮದೇ ಆದ ಆಚರಣೆಗಳನ್ನು ನಿರ್ವಹಿಸಬಹುದು ಎಂದು 26ನೇ ವಿಧಿಯೂ ಹೇಳುತ್ತದೆ. ಹೀಗಿರುವಾಗ ಈಗ ಪ್ರಸ್ತಾಪಿಸಿರುವ ಮಸೂದೆಯೂ ಅಲ್ಪಸಂಖ್ಯಾತ ಸಮುದಾಯಗಳ ಹಕ್ಕುಗಳನ್ನು ಉಲ್ಲಂಘಿಸುತ್ತದೆ’ ಎಂದು ಪ್ರತಿಭಟನಕಾರರು ಪ್ರಶ್ನಿಸಿದ್ದಾರೆ.

Join Whatsapp