ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ನೂತನ ರಾಜ್ಯಾಧ್ಯಕ್ಷರಾಗಿ ಅಥಾವುಲ್ಲಾ ಪುಂಜಾಲ್‌ಕಟ್ಟೆ ಆಯ್ಕೆ

Prasthutha|

ಬಳ್ಳಾರಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಪ್ರತಿನಿಧಿ ಸಭೆಯು ಬಳ್ಳಾರಿ ಜಿಲ್ಲೆಯ ಹೊಸ ಪೇಟೆಯಲ್ಲಿ ನಡೆಯಿತು. ಫ್ಯಾಸಿಸಂ ಕಬಂಧ ಬಾಹುಗಳಿಂದ ನ್ಯಾಯವನ್ನು ಸ್ವತಂತ್ರಗೊಳಿಸೋಣ ಎಂಬ ಘೋಷಣೆಯೊಂದಿಗೆ ನೆಡದ ಸಮಾವೇಶದಲ್ಲಿ ರಾಜ್ಯಾಧ್ಯಕ್ಷ ಫಯಾಝ್ ದೊಡ್ಡಮನೆ ಅಧ್ಯಕ್ಷತೆ ವಹಿಸಿ ಧ್ವಜಾರೋಹಣ ನೆರೆವೇರಿಸಿದರು.

- Advertisement -

ಪ್ರತಿನಿಧಿ ಸಭೆಯ ಉದ್ಘಾಟನೆಯನ್ನು ರಾಷ್ಟ್ರೀಯ ಕಾರ್ಯದರ್ಶಿ ಕಲೀಮ್ ತುಮಕೂರು ಮಾಡಿದರು. ವಾರ್ಷಿಕ ವರದಿಯನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ವದಕತ್ ಷಾ ವಾಚಿಸಿದರು‌.ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಿ ಶೈಕ್ಷಣಿಕ, ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂಧರ್ಭದಲ್ಲಿ ಸಂಘಟನೆಯ ನೂತನ ಸಾಲಿನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಚುನಾವಣಾ ಪ್ರಕ್ರಿಯೆಯನ್ನು ರಾಷ್ಟ್ರೀಯ ಸಮಿತಿ ಸದಸ್ಯ ಪಿ ವಿ ಶುಹೈಬ್ ಮಾಡಿದರು.

- Advertisement -

ನೂತನ ರಾಜ್ಯ ಪದಾಧಿಕಾರಿಗಳು

ರಾಜ್ಯಾಧ್ಯಕ್ಷರಾಗಿ  – ಅಥಾವುಲ್ಲಾ ಪುಂಜಲ್ಕಟ್ಟೆ, ಪ್ರಧಾನ ಕಾರ್ಯದರ್ಶಿ – ಅನೀಸ್ ಪುತ್ತೂರು, ಉಪಾಧ್ಯಕ್ಷರು – ಸ್ವದಕತ್ ಷಾ ಮತ್ತು ಶೈಮಾ ಷರೀಫ್, ಕಾರ್ಯದರ್ಶಿ- ಅಲ್ತಾಫ್ ಹೊಸಪೇಟೆ, ಸರ್ಫರಾಝ್ ಗಂಗಾವತಿ, ಮಿಸ್ರಿಯಾ, ಕೋಶಾಧಿಕಾರಿ – ಸವಾದ್ ಕಲ್ಲರ್ಪೆ

ಸಮತಿ ಸದಸ್ಯರಾಗಿ  ಮುಹಮ್ಮದ್ ಸಾದಿಕ್ , ಬಾಷಾ ಕೊಪ್ಪಳ, ರೋಷನ್ ನವಾಝ್, ಆಯೆಷಾ ಮುರ್ಶಿದಾ, ಝುಬೈರ್ ಬೆಂಗಳೂರು, ಫಹಾದ್ ಅನ್ವರ್, ಫಾತಿಮಾ ಉಸ್ಮಾನ್ ಆಯ್ಕೆಯಾದರು. 

Join Whatsapp