ಮಾರ್ಚ್ 17ರ ಕರ್ನಾಟಕ ಬಂದ್ ಗೆ ಕ್ಯಾಂಪಸ್ ಫ್ರಂಟ್ ಬೆಂಬಲ

Prasthutha|

ಬೆಂಗಳೂರು: ಹಿಜಾಬ್ ವಿಚಾರದಲ್ಲಿ ಸಂವಿಧಾನದ ಹಕ್ಕುಗಳನ್ನು ನಿರ್ಲಕ್ಷಿಸಿ ನೀಡಿದ ಹೈಕೋರ್ಟ್ ತೀರ್ಪು ಖಂಡಿಸಿ ಅಮೀರೆ ಇ ಶರೀಯತ್ ಸಗೀರ್ ಅಹಮ್ಮದ್ ರಶಾದಿ ಸಾಹಬ್ ಕರೆ ನೀಡಿರುವ ನಾಳಿನ (ಮಾರ್ಚ್ 17)  ಕರ್ನಾಟಕ ಬಂದ್ ಗೆ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿಯು ಬೆಂಬಲ ವ್ಯಕ್ತಪಡಿಸಿದೆ.

- Advertisement -

ಸಂವಿಧಾನ ನೀಡಿರುವ ವೈಯಕ್ತಿಕ ಹಕ್ಕು, ಧಾರ್ಮಿಕ ಹಕ್ಕನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಹೈ ಕೋರ್ಟ್ ತೀರ್ಪು ನೀಡಿದ್ದನ್ನು ಪ್ರಶ್ನಿಸದೇ ಇರಲು ಸಾಧ್ಯವಿಲ್ಲ. ಆದುದರಿಂದ ನಾಳೆ ನಡೆಯುವ ಕರ್ನಾಟಕ ಬಂದ್ ಗೆ ಕ್ಯಾಂಪಸ್ ಫ್ರಂಟ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸುವುದರೊಂದಿಗೆ ಎಲ್ಲಾ ವಿದ್ಯಾರ್ಥಿ ಸಂಘಟನೆಗಳು, ವಿದ್ಯಾರ್ಥಿಗಳು ಈ ಬಂದ್ ಗೆ ಬೆಂಬಲ ವ್ಯಕ್ತಪಡಿಸಬೇಕೆಂದು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp