ಹಂಪನಕಟ್ಟೆ ಕಾಲೇಜಿನಲ್ಲಿ ಭಾರತ ಮಾತಾ ಪೂಜಾ ಹೆಸರಿನ ಸಂಘಪರಿವಾರ ಪ್ರೇರಿತ ಕಾರ್ಯಕ್ರಮ ರದ್ದುಗೊಳಿಸುವಂತೆ ಕ್ಯಾಂಪಸ್ ಫ್ರಂಟ್ ಜಿಲ್ಲಾಧಿಕಾರಿಗಳಿಗೆ ಮನವಿ

Prasthutha|

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಹಂಪನಕಟ್ಟೆ ಕಾಲೇಜಿನಲ್ಲಿ ಭಾರತ ಮಾತಾ ಪೂಜಾ ದಿನ ಹೆಸರಿನಲ್ಲಿ  ಆಗಸ್ಟ್ 11ರಂದು ಹಿಂದುತ್ವ ಸಿದ್ದಾಂತದ ಕಾರ್ಯಕ್ರಮವನ್ನು ಆಯೋಜಿಸಿರುವುದು ಖಂಡನೀಯ. ಇದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

- Advertisement -

ಭಾರತದ ಭೂಪಟವನ್ನೇ ಬದಲಾಯಿಸಿ, ಭಗವಧ್ವಜ ಹಿಡಿದ ಮಹಿಳೆಯನ್ನು ಚಿತ್ರೀಕರಿಸಿ ದೇಶದ್ರೋಹದ ಕೆಲಸವನ್ನು ಕಾಲೇಜು ಪ್ರಾಂಶುಪಾಲರ ಬೆಂಬಲದೊಂದಿಗೆ ಕಾಲೇಜು ವಿದ್ಯಾರ್ಥಿ ಸಂಘದ ಹೆಸರಿನಲ್ಲಿ ಎಬಿವಿಪಿ ಮಾಡಿದ್ದು, ಇವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಕ್ಯಾಂಪಸ್ ಫ್ರಂಟ್ ಆಗ್ರಹಿಸಿದೆ.

ಧಾರ್ಮಿಕ ಆಚರಣೆಗಳಿಗೆ ಅವಕಾಶವಿಲ್ಲವೆಂದು ಹಿಜಾಬ್ ಧಾರಿ ವಿದ್ಯಾರ್ಥಿನಿಯರ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಹಂಪನಕಟ್ಟೆ ಕಾಲೇಜು ಪ್ರಾಂಶುಪಾಲರಿಗೆ ಇದು ಧಾರ್ಮಿಕ ಆಚರಣೆಯಾಗಿ ಕಾಣಲಿಲ್ಲವೇ ಎಂದು ಕ್ಯಾಂಪಸ್ ಫ್ರಂಟ್ ದ.ಕ ಜಿಲ್ಲಾಧ್ಯಕ್ಷ ತಾಜುದ್ದೀನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಈ ಕಾರ್ಯಕ್ರಮವನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದರು.

- Advertisement -

ನಿಯೋಗದಲ್ಲಿ ಕ್ಯಾಂಪಸ್ ಫ್ರಂಟ್ ಮಂಗಳೂರು ನಗರ ಅಧ್ಯಕ್ಷ ಸರ್ಫುದ್ದೀನ್, ಜಿಲ್ಲಾ ನಾಯಕರಾದ ಶಂಸುದ್ದೀನ್, ಅಫೀಝ್ ಉಪಸ್ಥಿತರಿದ್ದರು.

Join Whatsapp