ವಿಟ್ಲದ ದಲಿತ ಬಾಲಕಿಯ ಮೇಲೆ ಸಂಘಪರಿವಾರ ಕಾರ್ಯಕರ್ತರಿಂದ ಅತ್ಯಾಚಾರ: ಇದನ್ನು ‘ಮಂಗಳೂರು ಫೈಲ್ಸ್’ ಎಂದು ಕರೆಯಬಹುದೇ; ದಿನೇಶ್ ಗುಂಡೂರಾವ್ ಪ್ರಶ್ನೆ

Prasthutha|

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಡುಪಿ ಪ್ರಕರಣವನ್ನು ಕೇರಳ ಫೈಲ್ಸ್ಗೆ ಹೋಲಿಸಿದ್ದಾರೆ. ಹಾಗಾದರೆ ಇವರದ್ದೇ ಕ್ಷೇತ್ರದ ವಿಟ್ಲದಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಂಘಪರಿವಾರಕ್ಕೆ ಸೇರಿದ 3 ಯುವಕರಿಂದ ನಡೆದಿರುವ ನಿರಂತರ ಅತ್ಯಾಚಾರ ಯಾವ ಫೈಲ್ಸ್? ಇದನ್ನು ಮಂಗಳೂರು ಫೈಲ್ಸ್ ಎಂದು ಕರೆಯಬಹುದೇ? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಿಜೆಪಿಯ ಔಟ್ ಗೋಯಿಂಗ್ ಅಧ್ಯಕ್ಷ/ವಿದೂಷಕ ಕಟೀಲ್ ಉಡುಪಿ ಪ್ರಕರಣವನ್ನು ಕೇರಳ ಫೈಲ್ಸ್ಗೆ ಹೋಲಿಸಿದ್ದಾರೆ. ಹಾಗಾದರೆ ಇವರದ್ದೇ ಕ್ಷೇತ್ರದ ವಿಟ್ಲದಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಂಘಪರಿವಾರಕ್ಕೆ ಸೇರಿದ 3 ಯುವಕರಿಂದ ನಡೆದಿರುವ ನಿರಂತರ ಅತ್ಯಾಚಾರ ಯಾವ ಫೈಲ್ಸ್? ಇದನ್ನು ಮಂಗಳೂರು ಫೈಲ್ಸ್ ಎಂದು ಕರೆಯಬಹುದೇ? ಎಂದು ಪ್ರಶ್ನಿಸಿದ್ದಾರೆ.


ಉಡುಪಿ ಪ್ರಕರಣವನ್ನು ರಾದ್ಧಾಂತ ಮಾಡಿದ BJPಯವರು, ವಿಟ್ಲದಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ನಡೆದಿರುವ ಅತ್ಯಾಚಾರದ ಬಗ್ಗೆ ಯಾಕೆ ಬಾಯಿ ಬಿಡುತ್ತಿಲ್ಲ? ಆರೋಪಿಗಳು ಇವರ ಸಂಘಟನೆಗೆ ಸೇರಿದವರು ಎನ್ನುವ ಕಾರಣಕ್ಕಾಗಿ ಮೌನವೇ? BJPಯವರ ಪ್ರಕಾರ ಅಪರಾಧಿಗಳ ಧರ್ಮದ ಆಧಾರದ ಮೇಲೆ ಆ ಪ್ರಕರಣದ ತೀವ್ರತೆ ಮತ್ತು ಗುರುತ್ವ ನಿರ್ಧಾರವಾಗುತ್ತದೆಯೇ? ಎಂದು ವಾಗ್ದಾಳಿ ನಡೆಸಿದ್ದಾರೆ.
ಗುಜರಾತ್ ಗಲಭೆ ನಡೆಯುವಾಗ ಕೇಂದ್ರದಲ್ಲಿ BJP ಸರ್ಕಾರವಿತ್ತು. ಈಗ ಮಣಿಪುರದಲ್ಲಿ ಗಲಭೆ ನಡೆಯುತ್ತಿರುವಾಗಲೂ ಕೇಂದ್ರದಲ್ಲಿ BJPಸರ್ಕಾರವೇ ಇದೆ. ಕನಿಷ್ಠ ಪಕ್ಷ ಅಂದು ಪ್ರಧಾನಿಯಾಗಿದ್ದ ವಾಜಪೇಯಿ ಮೋದಿಯವರಿಗೆ ‘ರಾಜಧರ್ಮ’ ಪಾಲಿಸುವಂತೆ ಹೇಳಿದ್ದರು. ಈಗ ಮತ್ತೊಮ್ಮೆ ಮೋದಿಯವರಿಗೆ ರಾಜಧರ್ಮ ಪಾಲಿಸುವಂತೆ ಹೇಳಲು BJPಯಲ್ಲಿ ಯಾರಿಗೆ ತಾಕತ್ತಿದೆ? ಎಂದು ಸವಾಲು ಹಾಕಿದ್ದಾರೆ.

- Advertisement -

Join Whatsapp