ಪಿಎಫ್ ಐ ವಿರೋಧಿಸುತ್ತದೆ ಅಂದ ಮಾತ್ರಕ್ಕೆ ಸಾವರ್ಕರ್ ಫೋಟೋ ತೆಗೆಯಲು ಸಾಧ್ಯವಿಲ್ಲ: ಸಚಿವ ಸುನೀಲ್ ಕುಮಾರ್

Prasthutha|

ಉಡುಪಿ: ಸಾರ್ವಕರ್ ಭಾವಚಿತ್ರಕ್ಕೆ ಆಕ್ಷೇಪಣೆ ಯಾವ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಎರಡು ಕರಿನೀರಿನ ಶಿಕ್ಷೆ ಅನುಭವಿಸಿರುವ ಹೋರಾಟಗಾರ.  ಸಾವರ್ಕರ್ ಅವರ ಬಗ್ಗೆ ಗೊತ್ತಾಗಲು ಅಂಡಮಾನ್ ಗೆ ಭೇಟಿ ಮಾಡಬೇಕು. ಸಾವರ್ಕರ್ ಬಗ್ಗೆ ಆಕ್ಷೇಪಿಸಿ ಮಾತನಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಸಾವರ್ಕರ್ ಅವರನ್ನು ಆಕ್ಷೇಪಿಸುವುದು ಅಂದರೆ ಸ್ವಾತಂತ್ರ್ಯವನ್ನು ಆಕ್ಷೇಪಿಸಿದಂತೆ. ಸಾವರ್ಕರ್ ಅಪ್ರತಿಮ ದೇಶಭಕ್ತ. ಪಿಎಫ್ಐ ವಿರೋಧಿಸುತ್ತದೆ ಅಂದ ಮಾತ್ರಕ್ಕೆ ಸಾವರ್ಕರ್ ಫೋಟೋ ತೆಗೆಯಲು ಸಾಧ್ಯವಿಲ್ಲ. ಟಿಪ್ಪು, ಸಾವರ್ಕರ್ ಹೋಲಿಕೆ ಒಂದು ವ್ಯವಸ್ಥಿತ ಷಡ್ಯಂತ್ರ ಎಂದು ಹೇಳಿದರು.

- Advertisement -

ಸಣ್ಣ ಘಟನೆ ಇಟ್ಟುಕೊಂಡು ಅಶಾಂತಿ ಸೃಷ್ಟಿಸಲು ಪಿಎಫ್ ಐ ಸಂಘಟನೆ ಯತ್ನಿಸುತ್ತಿದೆ. ಸರಕಾರ ಇಂಥವರನ್ನು ಹದ್ದುಬಸ್ತಿನಲ್ಲಿ ಇಡುತ್ತದೆ. ಪೊಲೀಸ್ ಇಲಾಖೆ, ಗೃಹ ಇಲಾಖೆ ಎಚ್ಚರಿಕೆ ಹೆಜ್ಜೆ ಇಡುತ್ತದೆ. ಸಾವರ್ಕರ್ ಭಾವಚಿತ್ರಕ್ಕೆ ವಿರೋಧ ಪೂರ್ವ ನಿಯೋಜಿತ ಕೃತ್ಯ ಎಂದು ಉಡುಪಿಯಲ್ಲಿ ಸಚಿವ ಸುನಿಲ್ ಕುಮಾರ್ ಹೇಳಿದರು.

Join Whatsapp