Home ಟಾಪ್ ಸುದ್ದಿಗಳು ಕ್ಯಾಂಟರ್- ಬೈಕ್ ಡಿಕ್ಕಿ; ಇಬ್ಬರು ದಾರುಣ ಸಾವು

ಕ್ಯಾಂಟರ್- ಬೈಕ್ ಡಿಕ್ಕಿ; ಇಬ್ಬರು ದಾರುಣ ಸಾವು

ಬೆಂಗಳೂರು: ವೇಗವಾಗಿ ಬಂದ  ಕ್ಯಾಂಟರ್  ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ದೇವನಹಳ್ಳಿ-ದೊಡ್ಡಬಳ್ಳಾಪುರ ರಸ್ತೆಯ ಲಕ್ಷ್ಮಿಪುರ ಗೇಟ್ ಬಳಿ  ನಡೆದಿದೆ.

ಬಾಲೇಪುರ ಗ್ರಾಮದ ರಾಕೇಶ್ (22) ಹಾಗೂ ದೇವನಹಳ್ಳಿ ಪಟ್ಟಣದ ಪ್ರತಾಪ್ (28) ಮೃತಪಟ್ಟವರು. ಬೈಕ್​​ನಲ್ಲಿ ಹೋಗುತ್ತಿದ್ದಾಗ ಎದುರುನಿಂದ ಬಂದ ಕ್ಯಾಂಟರ್ ಡಿಕ್ಕಿ‌ ಹೊಡೆದ ರಭಸಕ್ಕೆ ಕ್ಯಾಂಟರ್‌ನೊಳಗೆ ಅರ್ಧ ಬೈಕ್ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ.

ದಿಲೀಪ್ ಬಿಲ್ಡ್ ಕನ್ಸ್ಟ್ರಕ್ಷನ್‌ನಿಂದ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ರಸ್ತೆ ವಿಭಜಕದಲ್ಲಿ ಸೂಕ್ತ ಸೂಚನಾ ಫಲಕ ಅಳವಡಿಸದ ಕಾರಣ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಎಸ್​ಪಿ ಪುರುಷೋತ್ತಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version