ಕೆರೆಗೆ ಕಾರು ಉರುಳಿಬಿದ್ದು ನಾಲ್ಕು ಯುವಕರು ಮೃತ್ಯು

Prasthutha|

- Advertisement -

ಚಿಕ್ಕಬಳ್ಳಾಪುರ: ಕೆರೆಗೆ ಕಾರು ಉರುಳಿಬಿದ್ದು ನಾಲ್ಕು ಜನ ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಂತಾಮಣಿ ಪಟ್ಟಣದ ನೆಕ್ಕೂಂದಿಪೇಟೆ ನಿವಾಸಿ ಟ್ಯಾಗೂರು(21), ಚಿಕ್ಕಬಳ್ಳಾಪುರದ ನಿವಾಸಿಗಳಾದ ಪವನ್(22), ಆರ್ಯನ್(22), ಚಿಕ್ಕಬಳ್ಳಾಪುರದ ಹೆಚ್​.ಎಸ್​.ಗಾರ್ಡನ್​ ನಿವಾಸಿ ವಸಂತ್(21) ಮೃತ ದುರ್ದೈವಿಗಳು.

- Advertisement -

ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರ ಮೂಲಕ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಕಾರಿನಲ್ಲಿ ಹೊರಟಿದ್ದ ನಾಲ್ಕು ಜನ ವಿದ್ಯಾರ್ಥಿಗಳು, ಚಿಕ್ಕಬಳ್ಳಾಪುರ ನಗರ ಹೊರಹೊಲಯದ ಬೈಪಾಸ್ ನಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು, ಅಮಾನಿ ಗೋಪಾಲಕೃಷ್ಣ ಕೆರೆಗೆ ಉರುಳಿಬಿದ್ದಿದೆ. ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.

Join Whatsapp