ಕಾರು ಮರಕ್ಕೆ ಡಿಕ್ಕಿ: ಮೆಸ್ಕಾಂ‌ ಜೆಇ ಸೇರಿ ಇಬ್ಬರು ಸಾವು

Prasthutha|

- Advertisement -

ಚಿಕ್ಕಮಗಳೂರು: ವೇಗವಾಗಿ ಹೋಗುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೆಸ್ಕಾಂನ ಕಿರಿಯ ಇಂಜಿನಿಯರ್ (ಜೆಇ) ಸೇರಿ ಇಬ್ಬರು ಮೃತಪಟ್ಟಿರುವ ‌ದಾರುಣ ಘಟನೆ ಅಜ್ಜಂಪುರದ ಮಾಕನಹಳ್ಳಿಯಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಕಿರಣ್(32) ಹಾಗೂ ಅಜ್ಜಂಪುರ ತಾಲೂಕಿನ ಶಿವನಿ ಮೂಲದ ನಾಗರಾಜ್ (40) ಮೃತರು.

- Advertisement -

ಕಿರಣ್​ ಶಿವನಿ ಮೆಸ್ಕಾಂನಲ್ಲಿ ಜೆಇ ಆಗಿ ಕೆಲಸ ಮಾಡುತ್ತಿದ್ದರು. ಫೆ.8ರಂದು ಕಿರಣ್​ಗೆ ಮದುವೆ ನಿಗದಿಯಾಗಿತ್ತು.
ಎಲ್ಲವೂ ಚೆನ್ನಾಗಿದ್ದರೆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿದ್ದು. ಆದರೆ ಇವರ ಬಾಳಲ್ಲಿ ವಿಧಿ ಆಟವಾಡಿಬಿಟ್ಟಿದೆ.
ಮದುವೆ ಸಂಭ್ರಮದಲ್ಲಿ ಇದ್ದ ಮನೆಯಲ್ಲಿ ಸೂತಕ ಛಾಯೆ ಆವರಿಸಿದೆ.

Join Whatsapp