ಕಾರಿಗೆ ಬಸ್ ಡಿಕ್ಕಿ| ಕಾಸರಗೋಡು ಮೂಲದ ಇಬ್ಬರು ಮೃತ್ಯು

Prasthutha|

ಹಾವೇರಿ: ಕಾರಿಗೆ ಬಸ್ ಡಿಕ್ಕಿ ಹೊಡೆದು ಕಾಸರಗೋಡು ಮೂಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ನಡೆದಿದೆ.

- Advertisement -

ಕೇರಳದ ಕಾಸರಗೋಡು ಜಿಲ್ಲೆಯ ತಳಂಗರೆ ನುಸ್ರ ತ್ ನಗರದ ಮುಹಮ್ಮದ್ (65) ಪತ್ನಿ ಆಯಿಷಾ(62) ಅಪಘಾತದಲ್ಲಿ ಮೃತಪಟ್ಟವರು.
ಹುಬ್ಬಳ್ಳಿಯಿಂದ ಹಾನಗಲ್ ಕಡೆ ಹೊರಟಿದ್ದ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಮೃತರ ಪುತ್ರ ಝಿಯಾದ್, ಸೊಸೆ ಹಾಗೂ ಮೊಮ್ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

.

Join Whatsapp