KSRTC ಬಸ್ಸಿಗೆ ಡಿಕ್ಕಿ ಹೊಡೆದ ಕಾರು : ಗ್ರಾಮ ಪಂಚಾಯತ್ ಸದಸ್ಯ ಸ್ಥಳದಲ್ಲೇ ಮೃತ್ಯು

Prasthutha|

ಮೈಸೂರು: KSRTC ಬಸ್ ಹಾಗೂ ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

- Advertisement -

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಗ್ರಾಮದ ಬಳಿ ಘಟನೆ ನಡೆದಿದ್ದು, ನಿಲುವಾಗಿಲು ಗ್ರಾಪಂ ಸದಸ್ಯ ಭಾಸ್ಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಭಾಸ್ಕರ್ ಸ್ವಿಫ್ಟ್ ಕಾರಿನಲ್ಲಿ ತನ್ನ ಪತ್ನಿ, ಪುತ್ರ ಹಾಗೂ ತಾಯಿಯೊಂದಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp