ಟ್ಯಾಂಕರ್​ಗೆ ಕಾರು ಡಿಕ್ಕಿ: ಇಬ್ಬರು ಟೆಕ್ಕಿಗಳು ಸಾವು

Prasthutha|

ಮೈಸೂರು: ಹಾಲಿನ ಟ್ಯಾಂಕರ್​ಗೆ ಕಾರು ಡಿಕ್ಕಿ ಹೊಡೆದು ಯುವತಿಯರಿಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು-ಹುಣಸೂರು ಹೆದ್ದಾರಿಯ ರಂಗಯ್ಯನ ಕೊಪ್ಪಲು ಗೇಟ್ ಬಳಿ ನಡೆದಿದೆ.

- Advertisement -

ಮೈಸೂರಿನ ಜೀವಿತಾ(24) ಹಾಗೂ ಕೆ.ಪಿ.ಅಗ್ರಹಾರದ ಪ್ರತಿಕ್ಷಾ(24) ಮೃತಪಟ್ಟವರು.

ಇವರಿಬ್ಬರೂ ಸಾಫ್ಟ್​ವೇರ್ ಇಂಜಿನಿಯರುಗಳಾಗಿದ್ದು,ವಾರಾಂತ್ಯದ ಹಿನ್ನೆಲೆಯಲ್ಲಿ ಝೂಮ್ ಕಂಪನಿಯ ಮಾರುತಿ ಕಾರಿನಲ್ಲಿ ನಿನ್ನೆ ಸಂಜೆ 5 ಗಂಟೆಯ ಸುಮಾರಿಗೆ ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ 275ರ ಮೂಲಕ ಹುಣಸೂರು ಕಡೆಗೆ ಬರುತ್ತಿದ್ದರು.
ಈ ಸಂದರ್ಭದಲ್ಲಿ ಕಾರಿನ ಮುಂಬದಿಯ ಟೈರ್ ಪಂಚರ್ ಆಗಿ, ನಿಯಂತ್ರಣ ಸಿಗದೇ ಎದುರಿಗೆ ಬರುತ್ತಿದ್ದ ಹಾಲಿನ ಟ್ಯಾಂಕರ್​​ಗೆ ಗುದ್ದಿದೆ.

- Advertisement -

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಯುವತಿಯರಿಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸುದ್ದಿ ತಿಳಿದ ತಕ್ಷಣವೇ ಬಿಳಿಕೆರೆ ಪೊಲೀಸರು ಸ್ಥಳಕ್ಕಾಗಮಿಸಿ ಶವಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ. ಕಾರಿನಲ್ಲಿದ್ದ ದಾಖಲೆಗಳಿಂದ ಮೃತರ ಗುರುತು ಪತ್ತೆಯಾಗಿದೆ. ಘಟನೆಯಿಂದ ಕೆಲಹೊತ್ತು ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು ಸಂಚಾರ ಸ್ಥಗಿತವಾಗಿತ್ತು. ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Join Whatsapp