ವಂಚನೆ ಆರೋಪ: ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ, ಪುತ್ರ ನೀಲ್ ವಿರುದ್ಧ ಪ್ರಕರಣ ದಾಖಲು

Prasthutha|

ಮುಂಬೈ: ವಂಚನೆ ಆರೋಪದ ಮೇಲೆ ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ ಮತ್ತು ಅವರ ಪುತ್ರ ನೀಲ್ ವಿರುದ್ಧ ಮುಂಬೈ ಪೊಲೀಸರು ಗುರುವಾರ ಎಫ್‌ ಐಆರ್ ದಾಖಲಿಸಿದ್ದಾರೆ. ಭಾರತೀಯ ನೌಕಾಪಡೆಯ ಮೊದಲ ವಿಮಾನ ನೌಕೆ ಐಎನ್‌ಎಸ್ ವಿಕ್ರಾಂತ್ ಮರುಸ್ಥಾಪನೆಗಾಗಿ ಸಂಗ್ರಹಿಸಲಾದ ಸುಮಾರು 57 ಕೋಟಿ ರೂ. ವಂಚಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ.

- Advertisement -

ಭಾರತೀಯ ಸೇನೆಯ ಮಾಜಿ ಸಿಬ್ಬಂದಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಗುರುವಾರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಮತ್ತು ಅವರ ಪುತ್ರನ ವಿರುದ್ಧ ಎಫ್‌ ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2013 ರಿಂದ 2014 ರ ನಡುವೆ ಮಾಜಿ ಸಂಸದ ಕಿರಿತ್ ಸೋಮಯ್ಯ ಮತ್ತು ಅವರ ಮಗ ನೀಲ್ ಐಎನ್‌ಎಸ್ ವಿಕ್ರಾಂತ್ ಮರುಸ್ಥಾಪನೆಗಾಗಿ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿದ್ದರು. ಆದರೆ, ಹಣವನ್ನು ಸರ್ಕಾರಿ ಖಾತೆಗೆ ಜಮಾ ಮಾಡುವ ಬದಲು ಹಣವನ್ನು ಲಪಟಾಯಿಸಿದ್ದಾರೆ” ಎಂದು ದೂರುದಾರರು ಹೇಳಿದ್ದಾರೆ

- Advertisement -

” ನಾವು ಅವರ ಬ್ಯಾಂಕ್ ಖಾತೆ ಮತ್ತು ಇತರ ವಿವರಗಳನ್ನು ತನಿಖೆ ನಡೆಸುತ್ತಿದ್ದೇವೆ. ಈವರೆಗೆ ಯಾರಿಗೂ ಸಮನ್ಸ್ ಜಾರಿ ಮಾಡಿಲ್ಲ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Join Whatsapp