ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು: ಖಂಡಿಸಿದ ವಿಹೆಚ್‌ಪಿ

Prasthutha|

ಮಂಗಳೂರು : ಮುಸ್ಲಿಂ ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಭಾಷಣ ಮಾಡಿದ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು ಮಾಡಲಾಗಿದ್ದು, ಇದನ್ನು ವಿಶ್ವ ಹಿಂದೂ ಪರಿಷತ್ ಸಂಘಟನೆ ಖಂಡಿಸಿದ ಬೆಳವಣಿಗೆಯೂ ನಡೆದಿದೆ.

- Advertisement -

ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ ಪ್ರಭಾಕರ ಭಟ್ ರವರ ಮೇಲೆ ಕೇಸು ದಾಖಲಿಸಿದ್ದು ಖಂಡನೀಯ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಹೇಳಿದ್ದಾರೆ.

ತ್ರಿವಳಿ ತಲಾಕ್ ನಿಷೇಧದಿಂದ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆಯ ಹಕ್ಕು ಕೇಂದ್ರ ಸರಕಾರ ನೀಡಿದನ್ನು ಭಟ್ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ, ಅವರ ಮೇಲೆ ಕೇಸು ದಾಖಲಿಸುವ ಮೂಲಕ ಸಂಘ ಮತ್ತು ಹಿಂದೂ ಸಂಘಟನೆಗಳನ್ನು ಅಡಗಿಸುವ ಸಂಚು ಬಹಿರಂಗಗೊಂಡಿದೆ. ಸಿದ್ದರಾಮಯ್ಯ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿದೆ ಇದು.ಡಾ ಕಲ್ಲಡ್ಕ ಪ್ರಭಾಕರ ಭಟ್ ರವರ ಮೇಲೆ ಹಾಕಿರುವ ಕೇಸನ್ನು ವಾಪಸು ಪಡೆಯಬೇಕೆಂದು ಶರಣ್ ಪಂಪುವೆಲ್ ಆಗ್ರಹಿಸಿದ್ದಾರೆ

Join Whatsapp