ಕರು ಸಾಗಿಸುತ್ತಿದ್ದ ದಲಿತನ ಮೇಲೆ ಹಲ್ಲೆ ಪ್ರಕರಣ: 9 ಮಂದಿ ಬಜರಂಗದಳ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

Prasthutha|

ಸಕಲೇಶಪುರ: ವಾಹನದಲ್ಲಿ ಮನೆಗೆ  ಕರು ಸಾಗಿಸುತ್ತಿದ್ದ ದಲಿತ ಯುವಕ ಹಾಗೂ ಆತನ ಜೊತೆಗಿದ್ದವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳದ ಕಾರ್ಯಕರ್ತರೆನ್ನಲಾದ 9 ಮಂದಿ ವಿರುದ್ಧ ಸಕಲೇಶಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

- Advertisement -

ಕಿರಣ್, ಕೌಶಿಕ್, ನವೀನ್, ಗುರು, ದೀಪು, ರಘು, ಲೋಕೇಶ್, ಶಿವು ಮತ್ತು ಜಿಫ್ಟಿ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಕಲಂನಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇವರೆಲ್ಲರೂ ಬಜರಂಗದಳ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿದೆ.

ಹಲ್ಲೆಗೊಳಗಾದ ಮಂಜುನಾಥ್, ಹಲಸುಲಿಗೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದು, ಸದ್ಯ ಸದಸ್ಯರಾಗಿದ್ದಾರೆ. ಶನಿವಾರ ಸಂಜೆ ವೇಳೆಗೆ ತನ್ನ ಮನೆಗೆ ವಾಹನದಲ್ಲಿ ಕರುವನ್ನು ತೆಗೆದುಕೊಂಡು ಹೋಗುತ್ತಿದ್ದ ಮಂಜುನಾಥ್ ಮೇಲೆ ಆರೋಪಿತರು ಹೊಸ ಬಸ್ ನಿಲ್ದಾಣದ ಬಳಿ ಹಲ್ಲೆ ನಡೆಸಿದ್ದರು. ಜೊತೆಗಿದ್ದ ಮಂಜುನಾಥ್ ಅಣ್ಣನ ಮಗ ಕಾವೇಶ್ ಮೇಲೆಯೂ ಹಲ್ಲೆಗೆ ಮುಂದಾಗಿ ಬೆದರಿಕೆ ಹಾಕಿದ್ದರು. 

Join Whatsapp