ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ: ಬಿಜೆಪಿ ಮುಖಂಡ ಸೇರಿ 9 ಜನರ ವಿರುದ್ಧ ಪ್ರಕರಣ ದಾಖಲು

Prasthutha|

ಮಂಗಳೂರು: ಬೆಳ್ತಂಗಡಿಯಲ್ಲಿ ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆನಡೆಸಿರುವ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಸೇರಿ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಜಾಗದ ತಕರಾರಿನ ಹಿನ್ನೆಲೆಯಲ್ಲಿ ಬಿಜೆಪಿ ಎಸ್.ಟಿ.ಮೋರ್ಛಾ ಅಧ್ಯಕ್ಷ ಚೆನ್ನಕೇಶವ ಸೇರಿ ಹಲವರು ಮಹಿಳೆಯ ಬಟ್ಟೆ ಹರಿದು ಹಾಕಿ ಅರೆಬೆತ್ತಲೆಗೊಳಿಸಿ ಗಂಭೀರ ಹಲ್ಲೆನಡೆಸಿರುವ ಬಗ್ಗೆ ಶನಿವಾರ ವರದಿಯಾಗಿತ್ತು.

- Advertisement -

ಬಿಜೆಪಿ ಮುಖಂಡ ಚೆನ್ನಕೇಶವ, ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಸುಗುಣ, ಲೋಕಯ್ಯ, ಅನಿಲ್, ಲಲಿತ, ಎಂಬವರ ವಿರುದ್ಧ ಎಫ್ ಐಆರ್ ದಾಖಲಾಗಿದ್ದು. ಐಪಿಸಿ 143, 147, 148, 323, 324, 504, 354, 354(B), 506, 149 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಗೆ ಅರೆಬೆತ್ತಲೆ ಮಾಡಿ ಹಲ್ಲೆ ನಡೆಸಿದ್ದನ್ನು ವಿಡಿಯೋ ಮಾಡಿದ ಬಗ್ಗೆಯೂ ದೂರು ದಾಖಲಾಗಿದೆ.

ಹಲ್ಲೆಗೊಳಗಾದ ಮಹಿಳೆಯ ಕುಟುಂಬಸ್ಥರು ಸಲ್ಲಿಸಿದ್ದ 94ಸಿ ಅರ್ಜಿಯ ಅಳತೆಗೆಂದು ಅಧಿಕಾರಿಗಳು ಬಂದಿದ್ದರು. ಈ ಸಂದರ್ಭ ಜಾಗದ ಬಗ್ಗೆ ಇನ್ನೊಂದು ತಂಡ ತಕರಾರು ತೆಗೆದಿದೆ. ಇದರಿಂದಾಗಿ ಅಳತೆಗೆ ಬಂದ ಅಧಿಕಾರಿಗಳು ಸಾಧ್ಯವಿಲ್ಲ ಎಂದು ಬಿಟ್ಟು ಹೋಗಿದ್ದಾರೆ. ಅಧಿಕಾರಿಗಳು ತೆರಳಿದ ಬಳಿಕ ಮಹಿಳೆಯ ಮೇಲೆ ಹಲ್ಲೆ ಬಿಜೆಪಿ ಮುಖಂಡ ಮತ್ತು ಗ್ಯಾಂಗ್ ಹಲ್ಲೆ ನಡೆಸಿತ್ತು.

- Advertisement -

ಕಳೆದ ತಿಂಗಳು ಎಸ್ಟಿ ಸಮದಾಯದ ವ್ಯಕ್ತಿ ಹೃದಯಾಘಾತವಾಗಿ ಸಾವನ್ನಪ್ಪಿದ್ದನ್ನು ಅರಣ್ಯ ಅಧಿಕಾರಿ ಸಂಧ್ಯಾ ಬೆದರಿಸಿದ್ದಕ್ಕೆ ನೊಂದು ಸಾವು ಎಂದು ಬೆಳ್ತಂಗಡಿ ಪೊಲೀಸ್ ಠಾಣೆ ಮುಂದೆ ಶವ ಇಟ್ಟು ಬಿಜೆಪಿ ಎಸ್ಟಿ ಮೋರ್ಛಾದ ಅಧ್ಯಕ್ಷ  ಚೆನ್ನಕೇಶವ ಮತ್ತು ತಂಡ ಪ್ರತಿಭಟನೆ ನಡೆಸಿತ್ತು.

Join Whatsapp