ಮಳೆ ನೀರಿಗೆ ಯುವತಿ ಸಾವು| BBMP ಅಧಿಕಾರಿಗಳ ವಿರುದ್ಧ ದೂರು ದಾಖಲು

Prasthutha|

ಬೆಂಗಳೂರು: ಕೆ.ಆರ್​.ಸರ್ಕಲ್ ಅಂಡರ್ ಪಾಸ್​​ನಲ್ಲಿ ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್​ಪಾಸ್​ನಲ್ಲಿ ನೀರು ತುಂಬಿದೆ. ನೀರು ಹೊರ ಹೋಗಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಯುವತಿ ಸಹೋದರ ಸಂದೀಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಅಸಹಜ ಸಾವು ಎಂದು ಎಫ್​​ಐಆರ್​​ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Join Whatsapp