ಮತಗಟ್ಟೆ ಪ್ರವೇಶಿಸಿ ನೀತಿ ಸಂಹಿತೆ ಉಲ್ಲಂಘನೆ: ಶಾಸಕ ಬೆನಕೆ ವಿರುದ್ಧ ಪ್ರಕರಣ ದಾಖಲು

Prasthutha|

ಬೆಳಗಾವಿ:  ವಿಶ್ವೇಶ್ವರಯ್ಯ ನಗರದಲ್ಲಿ ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ತೆರೆದ ಮತದಾನ ಕೇಂದ್ರಕ್ಕೆ ಶಾಸಕ ಅನಿಲ ಬೆನಕೆ ಪ್ರವೇಶಿಸುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ಮೇಲೆ ಪ್ರಕರಣ ದಾಖಲಾಗಿದೆ.

- Advertisement -

ಸೋಮವಾರ ಬೆಳಿಗ್ಗೆ ಮತಗಟ್ಟೆ ಆವರಣಕ್ಕೆ ಬಂದ ಶಾಸಕ, ಮಾಧ್ಯಮದವರ ಜತೆ ಮಾತನಾಡಿದರು. ಬಳಿಕ ಸರದಿಯಲ್ಲಿ ನಿಂತಿದ್ದ ಮತದಾರರಿಗೆ ಕೈ ಮುಗಿಯುತ್ತ ನೇರವಾಗಿ ಮತಗಟ್ಟೆ ಒಳಗೆ ಹೋದರು. ಕೆಲಹೊತ್ತು ಅಲ್ಲಿನ ಮತದಾನ ಪ್ರಕ್ರಿಯೆಗಳನ್ನು ವೀಕ್ಷಿಸಿದರು. ಅಲ್ಲದೆ ಮತಗಟ್ಟೆಯೊಳಗೆ ಮೊಬೈಲ್ ಫೋನ್ ಕರೆ ಸ್ವೀಕರಿಸಿ ಮಾತನಾಡಿದ್ದಾರೆ.

ಮತದಾರರ ಮೇಲೆ ಪ್ರಭಾವ ಬೀರಲು ಶಾಸಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಅವರ ಮೇಲೆ ಚುನಾವಣಾ ಅಧಿಕಾರಿಗಳು ಕ್ರಮ ಜರುಗಿಸಬೇಕು ಎಂದು ಮತಗಟ್ಟೆ ಹೊರಗಿದ್ದ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Join Whatsapp