ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಭಾಷಣ ಆರೋಪ: ಮುಸ್ಲಿಮ್ ಧರ್ಮಗುರು ವಿರುದ್ಧ ಪ್ರಕರಣ ದಾಖಲು

Prasthutha|

ಕೊಚ್ಚಿ: ಯೇಸುಕ್ರಿಸ್ತನ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಮಲಪ್ಪುರಂ ಜಿಲ್ಲೆಯ ಕೊಂಡಟ್ಟಿ ನಿವಾಸಿ ಹಾಗೂ ಮುಸ್ಲಿಂ ಧರ್ಮಗುರು ವಾಸೀಮ್ ಅಲ್ ಹಿಕಾಮಿ ವಿರುದ್ಧ ಕೊಚ್ಚಿ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮತ್ತು ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಅನೂಪ್ ಆಂಟನಿ ನೀಡಿದ ದೂರಿನ ಮೇರೆಗೆ ಎರ್ನಾಕುಲಂ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನಿರ್ದೇಶನದ ಮೇರೆಗೆ ಪೊಲೀಸರು ಐಪಿಸಿಯ 153-ಎ, 295-ಎ ಮತ್ತು 505 ರ ಅಡಿಯಲ್ಲಿ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಡಿಸೆಂಬರ್ 24, 2021 ರಂದು ಯೂಟ್ಯೂಬ್ ನಲ್ಲಿ ಕ್ರಿಶ್ಚಿಯನ್ ಧಾರ್ಮಿಕ ಭಾವನೆಗಳು ಮತ್ತು ಕ್ರಿಸ್ಮಸ್ ಗೆ ಸಂಬಂಧಿಸಿದಂತೆ ಯೇಸುಕ್ರಿಸ್ತನ ಜನನದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು ಎನ್ನಲಾಗಿದೆ.

Join Whatsapp