ಮಸೀದಿಯಲ್ಲೂ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದ ಪ್ರಮೋದ್ ಮುತಾಲಿಕ್​​ : ಪ್ರಕರಣ​ ದಾಖಲು

Prasthutha|

ಹುಬ್ಬಳ್ಳಿ: ಮಸೀದಿಯಲ್ಲೂ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನಿಡಿದ್ದಾರೆ.

- Advertisement -

ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ ಗಣೇಶ ವಿಸರ್ಜನೆ ವೇಳೆ ಭೇಟಿ ನೀಡಿದ ಬಳಿಕ  ಮಾಧ್ಯಮದವರೊಂದಿಗೆ ಮಾತನಾಡಿದ​​ ಅವರು, ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿರೋಧಿಸುವವರು ದೇಶದ್ರೋಹಿಗಳು. ಅಂಜುಮನ್ ಸಂಸ್ಥೆಯವರ ದುರದ್ದೇಶ ಏನೆಂದು ಈಗ ಎಲ್ಲರಿಗೂ ಗೊತ್ತಾಗಿದೆ. ಇವರು ದೇಶ ವಿಭಜನೆ ಮಾಡಿದ ದ್ರೋಹಿಗಳು. ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ. ನಿಮ್ಮ ನಮಾಜ್‌ಗೂ ನಾವು ಅಡ್ಡಿಪಡಿಸಬೇಕಾಗುತ್ತೆ. ರಾಣಿ ಚೆನ್ನಮ್ಮ ಮೈದಾನದಲ್ಲಿ ನಮಾಜ್‌ಗೆ ಅವಕಾಶ ಕೊಡದಂತೆ ಕೋರ್ಟ್‌ಗೆ ಹೋಗುತ್ತೇವೆ. ಇದು ಪಾಕಿಸ್ತಾನವಲ್ಲ, ನಿಮ್ಮಪ್ಪನ ಆಸ್ತಿಯಲ್ಲ, ವಿರೋಧಿಗಳ ಸೊಕ್ಕಡಗಿಸುವ ತಾಕತ್ತು ನಮಗಿದೆ ಅಂತ ವಾಗ್ದಾಳಿ ಮಾಡಿದ್ದಾರೆ.

ಮುತಾಲಿಕ್ ವಿರುದ್ಧ ಪ್ರಕರಣ ದಾಖಲು

- Advertisement -

 ಇತರೆ ಧರ್ಮಗಳ ಭಾವನೆಗಳಿಗೆ ಆಘಾತವನ್ನುಂಟು ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಮುತಾಲಿಕ್ ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಕಲಂ 153(ಎ), 295(ಎ) ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಮಹಾನಗರ ಪಾಲಿಕೆ 8 ವಲಯದ ಸಹಾಯ ಆಯುಕ್ತ ಚಂದ್ರಶೇಖರಗೌಡ ಎಂಬುವವರು ದೂರು ನೀಡಿದ್ದಾರೆ.

Join Whatsapp