ಬಾಲ್ಯ ವಿವಾಹ: ಪೋಷಕರು ಸೇರಿದಂತೆ ಪುರೋಹಿತನ ವಿರುದ್ಧ ಕೇಸ್ ದಾಖಲು

Prasthutha|

ಶಿವಮೊಗ್ಗ: ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದಲ್ಲಿ ಅಧಿಕಾರಿಗಳ ಕಣ್ಣುತಪ್ಪಿಸಿ ಬಾಲ್ಯ ವಿವಾಹ ನಡೆದಿರುವುದು ಬೆಳಕಿಗೆ ಬಂದಿದೆ.

- Advertisement -

ಫೆಬ್ರವರಿ 27 ರಂದು ಯಲ್ಲದಕೋಣೆಯ ನಿವಾಸಿ ರಮೇಶ್(33) ಎಂಬುವರ ಜೊತೆ ಬಳ್ಳಾರಿ ಜಿಲ್ಲೆಯ ಕೊಡ್ಲಿಗಿ ತಾಲೂಕಿನ ಕರ್ನಾರ್ ಹಟ್ಟಿಯ 16 ವರ್ಷದ ಬಾಲಕಿಯನ್ನ ಮದುವೆ ಮಾಡಲಾಗಿದೆ. ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದರೂ ಸಹ ಮದುವೆಯನ್ನು ನೆರವೇರಿಸಲಾಗಿದೆ. ಈ ಕುರಿತು ಮಕ್ಕಳ ಸಹಾಯವಾಣಿಗೆ ದೂರು ಬಂದ ಹಿನ್ನೆಲೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಯಲ್ಲದಕೋಣೆ ಗ್ರಾಮಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದೆ.

ಘಟನೆಗೆ ಸಂಬಂಧಿಸಿದಂತೆ ಬಾಲ್ಯ ವಿವಾಹ ಕಾಯ್ದೆಯಡಿ ರಮೇಶ್ ತಾಯಿ ಹಾಗೂ ಬಾಲಕಿಯ ತಂದೆ-ತಾಯಿ ಮತ್ತು ಮದುವೆ ಮಾಡಿಸಿದ ಪುರೋಹಿತರ ವಿರುದ್ಧ ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Join Whatsapp