ವಕ್ಫ್ ತಿದ್ದುಪಡಿ ವಿರೋಧಿಸಿ ಭಾಷಣ ಮಾಡಿದ SDPI ಮುಖಂಡರ ವಿರುದ್ಧ ಪ್ರಕರಣ ದಾಖಲು

Prasthutha|

ಕಾರಟಗಿ: ಪಟ್ಟಣದಲ್ಲಿ ವಕ್ಫ್ ಮಸೂದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ವೇಳೆ ಭಾಷಣ ಮಾಡಿದ ಆರೋಪದಲ್ಲಿ ಮೂವರ ಎಸ್ ಡಿಪಿಐ ಮುಖಂಡರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

- Advertisement -


SDPI ಪಕ್ಷದ ಕಾರ್ಯದರ್ಶಿ ಇಮ್ರಾನ್, ಕನಕಗಿರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಜ್ಮೀರ್ ಸಿಂಗನಾಳ ಮತ್ತು ಉಪಾಧ್ಯಕ್ಷ ದಾವೂದ್ ವಿರುದ್ಧ ಕಾರಟಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಸೆ.13ರಂದು ನಡೆಸಿದ ಪ್ರತಿಭಟನೆಯಲ್ಲಿ ಎಸ್ ಡಿ ಪಿ ಐ ಮುಖಂಡ ಇಮ್ರಾನ್ ಭಾಷಣದಲ್ಲಿ ಮಾತನಾಡುವಾಗ ಸಾವರ್ಕರ್ ಸಂತತಿ ಬಂದರೂ ಮುಸಲ್ಮಾನರ ವಕ್ಫ್ ಆಸ್ತಿಯನ್ನು ಮುಟ್ಟುಗೋಲು ಹಾಕಲು ಸಾಧ್ಯವಿಲ್ಲ. ಈ ವಕ್ಫ್ ಹೋರಾಟ ಕಾರಟಗಿಯಲ್ಲಿ ಸಣ್ಣ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿರಬಹುದು. ದೇಶದಲ್ಲಿ ಎನ್ ಆರ್ ಸಿ ಕಾಯ್ದೆ ಬಂದಾಗ ನಮ್ಮ ಸಮುದಾಯದ ಹೆಣ್ಣು ಮಕ್ಕಳು ಬೀದಿಗಿಳಿದು ಅನಿರ್ದಿಷ್ಟ ಧರಣಿ ಮಾಡಿ ರದ್ದುಗೊಳಿಸಿದರು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಕಾರಟಗಿ ಮಂಡಲದ ಅಧ್ಯಕ್ಷ ಮಂಜುನಾಥ ಮಸ್ಕಿ ‘ಎಸ್ ಡಿಪಿಐ ಕಾರ್ಯಕರ್ತರ ವಿವಾದಾತ್ಮಕ ಹೇಳಿಕೆ ನೀಡಿ ,ರಾಷ್ಟ್ರೀಯ ಏಕತೆ, ಧಾರ್ಮಿಕತೆ ಮತ್ತು ಸೌಹಾರ್ದತೆ ನಾಶ ಮಾಡುತ್ತದೆ. ಧರ್ಮದ ಹೆಸರಿನಲ್ಲಿ ಕೋಮು ಸೌಹಾರ್ದತೆ ಪ್ರಚೋದಿಸುತ್ತದೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಮೂವರು ಎಸ್ ಡಿಪಿಐ ಮುಖಂಡರ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp
Exit mobile version