ಸುರತ್ಕಲ್ ಟೋಲ್ ವಿರೋಧಿ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲು

Prasthutha|

ಮಂಗಳೂರು: ಅಕ್ಟೋಬರ್ 18ರಂದು ನಗರದ ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ಗೆ ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದ್ದ ಸುರತ್ಕಲ್ ಟೋಲ್ ವಿರೋಧಿ ಹೋರಾಟಗಾರರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

- Advertisement -

ಮಂಗಳವಾರ ಬೆಳಗ್ಗೆ ಸುಮಾರು ಸಾವಿರಕ್ಕೂ ಅಧಿಕ ಮಂದಿ ಟೋಲ್ಗೇಟ್ ಬಳಿ ಜಮಾಯಿಸಿ ಬೃಹತ್ ಪ್ರತಿಭಟನೆ ಮಾಡಿದ್ದರು. ರಾಷ್ಟ್ರೀಯ ಹೆದ್ದಾರಿಯನ್ನು ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎನ್ನುವ ನಿಯಮ ಇದೆ. ಆದರೆ ಅದನ್ನು ಉಲ್ಲಂಘಿಸಿದ ಹೋರಾಟಗಾರರು ಬಲವಂತವಾಗಿ ಪ್ರತಿಭಟನೆ ನಡೆಸಿ ಜನ ಸಂಚಾರಕ್ಕೆ ತಡೆಯೊಡ್ಡಿದ್ದಾರೆ ಎಂದು ದೂರು ದಾಖಲಾಗಿದ್ದು, ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 143, 147, 341, 283, 149ನಡಿ ಪ್ರಕರಣ ದಾಖಲಿಸಲಾಗಿದೆ.

ಹೋರಾಟಗಾರರ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಟೋಲ್ ಸಂಗ್ರಹ ಏಜನ್ಸಿ ನೂರ್ ಮೊಹಮ್ಮದ್ ಸಂಸ್ಥೆಯ ಮ್ಯಾನೇಜರ್ ಶಿಶುಪಾಲ್ ಹಾಗೂ ಎನ್ ಎಂ ಪಿಸಿ ಆರ್ ಸಿಎಲ್ ಇದರ ಪ್ರಾಜೆಕ್ಟ್ ಡೈರೆಕ್ಟರ್ ಲಿಂಗೇಗೌಡ ಅವರು ಪ್ರತ್ಯೇಕ ಎರಡು ದೂರು ದಾಖಲಿಸಿದ್ದಾರೆ

Join Whatsapp