ಜಾನುವಾರು ಕಳ್ಳಸಾಗಣೆ ಪ್ರಕರಣ: ಟಿಎಂಸಿ ಬಿರ್ಭುಮ್ ಜಿಲ್ಲಾ ಮುಖ್ಯಸ್ಥನ ಬಂಧನ

Prasthutha|

ಕಲ್ಕತ್ತ: ಜಾನುವಾರು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿಕಟವರ್ತಿ ಟಿಎಂಸಿ ಬಿರ್ಭುಮ್ ಜಿಲ್ಲಾ ಅಧ್ಯಕ್ಷ ಅನುಬ್ರತಾ ಮೊಂಡಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಂಧಿಸಿದೆ.

- Advertisement -

ಟಿಎಂಸಿ ನಾಯಕನನ್ನು ಈಗ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗುತ್ತಿದ್ದು, ಇದಕ್ಕೂ ಮುನ್ನ, ಸಿಬಿಐ  ತಂಡವು ಬಿರ್ಭುಮ್ ನ ಬೋಲ್ಪುರದಲ್ಲಿರುವ ಮೊಂಡಲ್ ಅವರ ನಿವಾಸಕ್ಕೆ ಆಗಮಿಸಿದೆ.

ಜಾನುವಾರು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಕೇಂದ್ರ ತನಿಖಾ ದಳ (ಸಿಬಿಐ) ಆಗಸ್ಟ್ 5 ರಂದು ಮೊಂಡಲ್ ಅವರಿಗೆ ನೋಟಿಸ್ ಕಳುಹಿಸಲಾಗಿತ್ತು ಎಂದು ತಿಳಿದು ಬಂದಿದೆ.

- Advertisement -

ಕಲ್ಕತ್ತದ ನಿಜಾಮ್ ಪ್ಯಾಲೇಸ್ ನಲ್ಲಿರುವ ಸಿಬಿಐ ಕಚೇರಿಗೆ ಆಗಸ್ಟ್ 8ರ ಸೋಮವಾರ ಹಾಜರಾಗುವಂತೆ ಮೊಂಡಲ್ ಅವರಿಗೆ ಸೂಚಿಸಲಾಗಿತ್ತು.

2020 ರ ಸೆಪ್ಟೆಂಬರ್ 21 ರಂದು ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಅಕ್ರಮ ಜಾನುವಾರು ಕಳ್ಳಸಾಗಣೆಗೆ ಸಂಬಂಧಿಸಿದಂತೆ ಮಾಜಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಕಮಾಂಡೆಂಟ್ ಅವರನ್ನು ಸಿಬಿಐ ಬಂಧಿಸಿತ್ತು.

Join Whatsapp