ಕರ್ನಾಟಕದಲ್ಲಿ ಭುಗಿಲೆದ್ದ ಕಾವೇರಿ ಕಿಚ್ಚು: ಬೆಂಗಳೂರಿನಲ್ಲಿ ತಮಿಳರು ವಾಸಿಸುವ ಏರಿಯಾಗಳಲ್ಲಿ ಕಟ್ಟೆಚ್ಚರ

Prasthutha|

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ ಇಂದು(ಸೆ.22) ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆಯಿದೆ. ಈ ವೇಳೆ ತಮಿಳುನಾಡು ಸರ್ಕಾರಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಯಬಹುದು. ಹೀಗಾಗಿ ಬೆಂಗಳೂರಿನಾದ್ಯಂತ ಕಟ್ಟೆಚ್ಚರ ವಹಿಸಲು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದರು.

- Advertisement -

ಮುಖ್ಯವಾಗಿ ತಮಿಳರು ವಾಸಿಸುವ ಏರಿಯಾಗಳಲ್ಲಿ ಹೆಚ್ಚು ನಿಗಾ ಇಡುವಂತೆ ಸೂಚಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ರಸ್ತೆ ತಡೆ ನಡೆಸುವವರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುವಂತೆ ಬೆಂಗಳೂರಿನ ಎಲ್ಲಾ ಡಿಸಿಪಿಗಳಿಗೆ ಪೊಲೀಸ್ ಆಯುಕ್ತ ದಯಾನಂದ್ ಸೂಚಿಸಿದ್ದಾರೆ.

ನಾಳೆ ಮಂಡ್ಯ ಬಂದ್​

- Advertisement -

ಸುಪ್ರೀಂ ಕೋರ್ಟ್​ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನಾಳೆ (ಸೆ.23) ರಂದು ಮಂಡ್ಯ ಬಂದ್​ಗೆ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಕರೆ ನೀಡಿದೆ. ಈ ಸಂಬಂಧ ಇಂದು ರಾಜಕೀಯ ಪಕ್ಷಗಳ ನಾಯಕರು, ವರ್ತಕರು, ಸಂಘಟನೆ ಮುಖಂಡರು ಸೇರಿ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ. ಇಂದಿನ ಸಭೆಯಲ್ಲಿ ಮಂಡ್ಯ ನಗರ ಬಂದ್‌ನ ರೂಪರೇಷೆ ಬಗ್ಗೆ ಚರ್ಚೆ ಮಾಡಲಿದ್ದಾರೆ.

Join Whatsapp