Home ಟಾಪ್ ಸುದ್ದಿಗಳು ಬಿಜೆಪಿ ಕಾರ್ಯಕರ್ತನ ಹತ್ಯೆ| ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಸಿಬಿಐ

ಬಿಜೆಪಿ ಕಾರ್ಯಕರ್ತನ ಹತ್ಯೆ| ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಸಿಬಿಐ

ಕೋಲ್ಕತ್ತಾ: ಬಿಜೆಪಿ ಕಾರ್ಯಕರ್ತನ ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗೆ ನೆರವಾಗುವವರಿಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಬಹುಮಾನ ಘೋಷಿಸಿದೆ.

ತಲೆಮರೆಸಿಕೊಂಡವರ ಪತ್ತೆಗೆ ನೆರವಾಗುವವರಿಗೆ 50,000 ರೂಪಾಯಿ ನಗದು ಬಹುಮಾನ ನೀಡುವುದಾಗಿ ಸಿಬಿಐ ಘೋಷಿಸಿದೆ. ಬಿಜೆಪಿ ಕಾರ್ಯಕರ್ತ ಅಭಿಜಿತ್ ಸರ್ಕಾರ್ ಹತ್ಯೆಯ ಆರೋಪಿಗಳನ್ನು ಪತ್ತೆ ಹಚ್ಚಲು ಸಹಾಯ ಮಾಡಿದವರಿಗೆ ಬಹುಮಾನ ನೀಡುವುದಾಗಿ ಸಿಬಿಐ ಅಧಿಕಾರಿ ಅಖಿಲೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.

‘‘ತಲೆಮರೆಸಿಕೊಂಡ ಐವರು ಆರೋಪಿಗಳ ಬಗ್ಗೆ ಸಿಬಿಐಗೆ ಮಾಹಿತಿ ನೀಡಿದರೆ ನಗದು ಬಹುಮಾನ ನೀಡಲಾಗುವುದು. ಮಾಹಿತಿದಾರರ ಹೆಸರನ್ನು ಗೌಪ್ಯವಾಗಿಡಲಾಗುವುದು” ಎಂದು ಸಿಬಿಐ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

Join Whatsapp
Exit mobile version