ಡ್ರಗ್ಸ್ ಪ್ರಕರಣದಂತೆ ಸಿಡಿ ಕೇಸ್ ಹಳ್ಳ ಹಿಡಿಯಲಿದೆ : ಮಾಜಿ ಸಂಸದ ಶಿವರಾಮೇಗೌಡ

Prasthutha|

ಮಂಡ್ಯ : ರಾಜ್ಯದಲ್ಲಿ ಡ್ರಗ್ಸ್ ಕೇಸ್ ಯಾವ ರೀತಿ ಹಳ್ಳ ಹಿಡಿದಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದೇ ರೀತಿ ಸಿಡಿ ಪ್ರಕರಣ ಕೂಡ ಹಳ್ಳ ಹಿಡಿಯಲಿದೆ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಹೇಳಿದ್ದಾರೆ.

- Advertisement -

ಡ್ರಗ್ಸ್ ಕೇಸ್ ನಲ್ಲಿ ಬೇಕಾದವರನ್ನು ಬಿಟ್ಟು ಬೇಡವಾದವರನ್ನು ಬಂಧಿಸಿದರು. ಅದೇ ರೀತಿಯಲ್ಲಿ ಈ ಸಿಡಿ ಪ್ರಕರಣ ಕೂಡ ಹಳ್ಳ ಹಿಡಿಯಲಿದೆ. ಪೊಲೀಸರು ಸರ್ಕಾರದ ಅನ್ನ ತಿನ್ನುತ್ತಿದ್ದೇವೆ ಎಂದು ತಿಳಿದುಕೊಂಡಿದ್ದರೆ ಇಷ್ಟೊತ್ತಿಗೆ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕಿತ್ತು. ಆದರೆ ಇಲ್ಲಿಯವರೆಗೆ ಬಂಧಿಸುವ ಕೆಲಸ ಮಾತ್ರ ಆಗಿಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅತ್ಯಾಚಾರ ಆರೋಪಿಯನ್ನು ಉಪಚುನಾವಣೆಯ ಪ್ರಚಾರಕ್ಕೆ ಆಹ್ವಾನ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಈ ಪ್ರಕರಣಕ್ಕೆ ಹೇಗೆ ನ್ಯಾಯ ಸಿಗಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.

Join Whatsapp