ನಾಡಿನೆಲ್ಲೆಡೆ ಸಂಭ್ರಮದ ಕ್ರಿಸ್ಮಸ್ । ಗಣ್ಯರಿಂದ ಶುಭ ಹಾರೈಕೆ

Prasthutha|

ಬೆಂಗಳೂರು: ಇಂದು ನಾಡಿನಾದ್ಯಂತ ಕ್ರಿಸ್ಮಸ್ ಹಬ್ಬದ ಸಂಭ್ರಮ ಮನೆಮಾಡಿತ್ತು. ಶಾಂತಿದೂತ ಏಸುಕ್ರಿಸ್ತರ ಜನ್ಮದಿನದ ಶುಭ ಸಂದರ್ಭದಲ್ಲಿ ಎಲ್ಲಾ ಕಡೆ ಕ್ರೈಸ್ತ ಸಮುದಾಯದವರು ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

- Advertisement -

ಇದರ ಪ್ರಯುಕ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ನಾಡಿನ ಜನತೆಗೆ ಕ್ರಿಸ್ಮಸ್ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭ ಕಾಮನೆಗಳು, ಎಲ್ಲರಿಗೂ ಸಂತಸ, ಉತ್ತಮ ಆರೋಗ್ಯ, ಯಶಸ್ಸು ದೊರೆಯಲಿ, ಸಾಂಕ್ರಾಮಿಕದ ಸಂಕಷ್ಟಗಳೆಲ್ಲ ಪರಿಹಾರವಾಗಲಿ ಎಂದು ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸೋಣ ಎಂದು ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

- Advertisement -

ಶಾಂತಿ, ಪ್ರೀತಿ, ದಯೆ, ಮತ್ತು ಕ್ಷಮಾ ಗುಣಗಳಿಂದ ಮಾಡುವ ಜನರ ಸೇವೆಯಿಂದ ದೇವರನ್ನು ಕಾಣಲು ಸಾಧ್ಯ ಎಂಬ ಜೀಸಸ್ ಕ್ರೈಸ್ತನ ಅರ್ಥಪೂರ್ಣ ಸಂದೇಶ ನಮ್ಮ ದಾರಿಗೆ ಬೆಳಕಾಗಿ ಮುನ್ನಡೆಸಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Join Whatsapp