Home ಟಾಪ್ ಸುದ್ದಿಗಳು ಬಿಹಾರ ಚುನಾವಣೆ ವೇಳೆ ಕೇಂದ್ರ ಸರ್ಕಾರ ರಾಣಾನನ್ನು ಗಲ್ಲಿಗೇರಿಸಲಿದೆ: ಸಂಜಯ್ ರಾವತ್‌

ಬಿಹಾರ ಚುನಾವಣೆ ವೇಳೆ ಕೇಂದ್ರ ಸರ್ಕಾರ ರಾಣಾನನ್ನು ಗಲ್ಲಿಗೇರಿಸಲಿದೆ: ಸಂಜಯ್ ರಾವತ್‌

0

ಪಾಟ್ನಾ: 2008ರ ಮುಂಬೈ ದಾಳಿಯ ಆರೋಪಿ ತಹವ್ವೂರ್‌ ರಾಣಾನನ್ನು ಕೊನೆಗೂ ಭಾರತಕ್ಕೆ ಕರೆತರಲಾಗಿದೆ. ಈಗಾಗಲೇ ರಾಣಾನನ್ನ ಕೋರ್ಟ್‌ 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ ಕಸ್ಟಡಿಗೆ ನೀಡಿದ್ದು, ಎನ್‌ ಐಎ ಮುಂದಿನ ವಿಚಾರಣೆ ಕೈಗೊಂಡಿದೆ. ಈ ನಡುವೆ ರಾಜಕೀಯ ಜಟಾಪಟಿಯೂ ನಡೆದಿದೆ.

ರಾಣಾ ಹಸ್ತಾಂತರ ವಿಚಾರ ಕುರಿತು ಮಾತನಾಡಿರುವ ಶಿವಸೇನಾ ಸಂಸದ ಸಂಜಯ್‌ ರಾವತ್‌, ರಾಣಾನನ್ನ ತಕ್ಷಣವೇ ಗಲ್ಲಿಗೇರಿಸಬೇಕು. ಆದರೆ ಬಿಹಾರ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಗಲ್ಲಿಗೇರಿಸಲಿದೆ ಎಂದು ಹೇಳಿದ್ದಾರೆ.

ರಾಣಾನನ್ನು ಭಾರತಕ್ಕೆ ಕರೆತರಲು 16 ವರ್ಷ ಬೇಕಾಯಿತು. ಆದರೆ ಅವನನ್ನು ಹಸ್ತಾಂತರಿಸುವ ಪ್ರಕ್ರಿಯೆ ಕಾಂಗ್ರೆಸ್‌ ಆಡಳಿತದಲ್ಲೇ ಪ್ರಾರಂಭವಾಯಿತು. ಆದ್ದರಿಂದ ಅವನನ್ನು ಮರಳಿ ಕರೆತಂದ ಕ್ರೆಡಿಟ್‌ ದೇಶಕ್ಕೆ ಸಲ್ಲುತ್ತದೆ. ಯಾರೂ ವೈಯಕ್ತಿಕವಾಗಿ ಕ್ರೆಡಿಟ್‌ ತೆಗೆದುಕೊಳ್ಳುವ ಅವಶ್ಯಕತೆಯಿಲ್ಲ. ಅಲ್ಲದೇ ತಹವ್ವೂರ್‌ ರಾಣಾ ಭಾರತಕ್ಕೆ ಹಸ್ತಾಂತರಿಸಲಾದ ಮೊದಲ ಆರೋಪಿಯಲ್ಲ. ಇದಕ್ಕೂ ಮುನ್ನ 1993ರ ಸರಣಿ ಸ್ಫೋಟದ ಆರೋಪಿ ಅಬು ಸಲೇಂನನ್ನು ಕೂಡ ಭಾರತಕ್ಕೆ ಹಸ್ತಾಂತರಿಸಲಾಗಿತ್ತು ಎಂದು ನುಡಿದಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version