ಮಂಕಿಪಾಕ್ಸ್ ಶಂಕಿತರನ್ನು ತಪಾಸಣೆಗೆ ಒಳಪಡಿಸಿ: ರಾಜ್ಯಗಳಿಗೆ ಕೇಂದ್ರದ ಸೂಚನೆ

Prasthutha|

ನವದೆಹಲಿ: ಮಂಕಿಪಾಕ್ಸ್ ಕಾಯಿಲೆಯ ಶಂಕಿತರನ್ನು ತಪಾಸಣೆಗೆ ಒಳಪಡಿಸುವಂತೆ ಹಾಗೂ ಶಂಕಿತರನ್ನು ಮತ್ತು ಕಾಯಿಲೆ ದೃಢಪಟ್ಟವರನ್ನು ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರಿಸಲು ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ನಿರ್ದೇಶಿಸಿದೆ.

- Advertisement -


ಎಲ್ಲಾ ರಾಜ್ಯಗಳಿಗೆ ಪತ್ರ ಬರೆದಿರುವ ಕೆಂದ್ರ ಆರೋಗ್ಯ ಸಚಿವಾಲಯದ ನಿರ್ದೇಶಕ ಅಪೂರ್ವ ಚಂದ್ರ ಅವರು, ಮಂಕಿಪಾಕ್ಸ್ ಬಗ್ಗೆ ಜನಸಾಮಾನ್ಯರಿಗಿರುವ ಅನಗತ್ಯ ಭೀತಿಯನ್ನು ನಿವಾರಿಸಿ ಎಂದು ಸಲಹೆ ನೀಡಿದ್ದಾರೆ.


‘ಭಾರತದಲ್ಲಿ ಹೊಸದಾಗಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ, ಆದರೆ ಯಾವ ಪ್ರಕರಣಗಳ ವರದಿಯೂ ಮಂಕಿಪಾಕ್ಸ್ ಸೋಂಕು ಇರುವುದನ್ನು ದೃಢಪಡಿಸಿಲ್ಲ, ಆದರೂ ಎಚ್ಚರಿಕೆಯಿಂದಿರಬೇಕು. ಸಚಿವಾಲಯವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ’ ಎಂದು ತಿಳಿಸಿದ್ದಾರೆ.



Join Whatsapp
Exit mobile version