ಕೇಂದ್ರದಿಂದ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯ: ಸಿದ್ದರಾಮಯ್ಯ

Prasthutha|

ಮೈಸೂರು: ‘ಕೇಂದ್ರ ಬಜೆಟ್ ನಲ್ಲಿ ಅತಿ ಹೆಚ್ಚು ಅನ್ಯಾಯವಾಗಿದ್ದರೆ ಅದು ಕರ್ನಾಟಕ ರಾಜ್ಯಕ್ಕೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -


‘ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ’ ಎಂಬ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ಸಮರ್ಥನೆಗೆ ಸೋಮವಾರ ತಿರುಗೇಟು ನೀಡಿದರು.


‘ನೀತಿ ಆಯೋಗದ ಸಭೆಗೆ ಉದ್ದೇಶಪೂರ್ವಕವಾಗಿಯೇ ನಾನು ಹಾಜರಾಗಲಿಲ್ಲ. ಬಹಿಷ್ಕರಿಸಿದ್ದೇನೆ. ನಮ್ಮೊಂದಿಗೆ, ಬಿಜೆಪಿಯೇತರ ಸರ್ಕಾರಗಳೂ ಬಹಿಷ್ಕರಿಸಿವೆ. ರಾಜ್ಯಕ್ಕೆ ನ್ಯಾಯವೇ ಸಿಗದಿದ್ದ ಮೇಲೆ ಆ ಸಭೆಗೆ ಹೋಗಿ ಏನು ಪ್ರಯೋಜನ?’ ಎಂದು ಕೇಳಿದರು.

- Advertisement -


‘ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಬಂದು ಸುಳ್ಳು ಹೇಳಿ ಹೋಗುತ್ತಾರೆ. ಈ ಬಾರಿಯೂ ಅದನ್ನೇ ಮಾಡಿದ್ದಾರೆ. ಇಲ್ಲಿಂದ ರಾಜ್ಯಸಭಾ ಸದಸ್ಯರಾಗಿರುವ ಅವರು, ಕರ್ನಾಟಕದ ಋಣ ತೀರಿಸಿಬಾರದಾ? ನಾವು ಮನವಿ ಸಲ್ಲಿಸಿ ಹಲವು ಬೇಡಿಕೆಗಳ ಬಗ್ಗೆ ಪ್ರಸ್ತಾಪಿಸಿದ್ದೆವು. ಅದ್ಯಾವುದಕ್ಕೂ ಅನುದಾನವನ್ನೇ ಕೊಟ್ಟಿಲ್ಲ. ಕರ್ನಾಟಕದ ಹೆಸರನ್ನೇ ಪ್ರಸ್ತಾಪಿಸಿಲ್ಲ. ಇದು ಅನ್ಯಾಯವಲ್ಲದೇ ಮತ್ತೇನು?’ ಎಂದು ಕೇಳಿದರು.



Join Whatsapp