ಕಳಸಾ ಬಂಡೂರಿ ಯೋಜನೆ ಕುರಿತಾದ ಕೇಂದ್ರದ ಆದೇಶದಲ್ಲಿ ದಿನಾಂಕವಿದೆ: ಕಾರಜೋಳ

Prasthutha|

ಬೆಂಗಳೂರು: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಕಳಸಾ ಬಂಡೂರಿ ಯೋಜನೆಯ ವಿಸ್ತೃತ ವರದಿ ಸಲ್ಲಿಸಲು ಕೇಂದ್ರ ರಾಜ್ಯಕ್ಕೆ ನೀಡಿದ ಆದೇಶ ಪತ್ರದಲ್ಲಿ ಆದೇಶದ ದಿನಾಂಕವನ್ನು ಸ್ಪಷ್ಟವಾಗಿ ನಮೂದಿಸಲಾಗಿದೆ ಎಂದು ಭಾರಿ ಹಾಗೂ ಸಣ್ಣ ನೀರಾವರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

- Advertisement -


ಬೆಳಗಾವಿಯಲ್ಲಿ ಇಂದು ಬೂತ್ ವಿಜಯ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆದೇಶ ಪತ್ರದಲ್ಲಿ ಸಂಬಂಧಿಸಿದ ನೀರಾವರಿ ಇಲಾಖೆಯ ಅಧಿಕಾರಿಯ ಸಹಿ ಹಾಗೂ ದಿನಾಂಕ ನಮೂದಿಸಲಾಗಿದೆ. ದಿನಾಂಕ ಇಲ್ಲವೆಂದು ಆರೋಪಿಸಿರುವ ಕಾಂಗ್ರೆಸ್ ನ ಹಿರಿಯ ನಾಯಕ ಎಚ್.ಕೆ. ಪಾಟೀಲ ಅವರು ಮತ್ತೊಮ್ಮೆ ಪರಿಶೀಲಿಸುವಂತೆ ತಿಳಿಸಿದರು.


ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ 5 ಸಾವಿರದ ಏಳನೂರು ಕೋಟಿ ಅನುದಾನ ನಿಗದಿಗೊಳಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಹತ್ವದ ಐದು ಏತ ನೀರಾವರಿ ಯೋಜನೆಗಳಿಗೆ ಅನುಮತಿ ನೀಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಡಿ ರಾಜ್ಯದ 5 ಲಕ್ಷ 38 ಸಾವಿರ ರೈತರಿಗೆ 107 ಕೋಟಿ ರೂಪಾಯಿ ಹಣ ಕೇಂದ್ರ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

Join Whatsapp