ನೂತನ ಶಿಕ್ಷಣ ಕಾಯ್ದೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಮುತ್ತಿಗೆ ಯತ್ನ| ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರ ಬಂಧನ

Prasthutha|

ಮಂಗಳೂರು: ನೂತನ ಶಿಕ್ಷಣ ಕಾಯ್ದೆ NEP ಕುರಿತ ವಿಚಾರ ಗೋಷ್ಠಿ ನಡೆಯುತ್ತಿದ್ದ ಮಂಗಳ ಸಭಾಂಗಣಕ್ಕೆ ಮುತ್ತಿಗೆಗೆ ಯತ್ನಿಸಿದ ಸಿಎಫ್ ಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನಾ ನಿರತ ಕಾರ್ಯಕರ್ತರನ್ನು ಗೇಟ್ ಬಳಿಯೇ ತಡೆದ ಪೊಲೀಸರು, ವಾಗ್ವಾದದ ಮಧ್ಯೆಯೇ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ನೂಕಾಟ ತಳ್ಳಾಟ ನಡೆದಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ನೂತನ ಶಿಕ್ಷಣ ನೀತಿ ಕಾಯ್ದೆಯ ಉದ್ಘಾಟನಾ ಸಮಾರಂಭದಲ್ಲಿ‌ ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ್ ಭಾಗಿಯಾಗಿದ್ದು, ಈ ಕಾರ್ಯಕ್ರಮಕ್ಕೆ ಸಿಎಫ್ ಐ ಕಾರ್ಯಕರ್ತರು ಘೇರಾವ್ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ತಡೆ ಹಿಡಿದು ಬಂಧಿಸಿದ್ದಾರೆ.

Join Whatsapp