ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ಬಂಧನ ವಿರೋಧಿಸಿ ಮಂಗಳೂರಿನಲ್ಲಿ ಭಾರೀ ಪ್ರತಿಭಟನೆ | CFI ಮುಖಂಡರು ಪೊಲೀಸ್ ವಶಕ್ಕೆ

Prasthutha|

ಮಂಗಳೂರು : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯದರ್ಶಿ ಶರೀಫ್ ರ ಅನ್ಯಾಯದ ಬಂಧನ ಮತ್ತು ಸಂಘಟನೆಯ ಮುಖಂಡರ ವಿರುದ್ಧ ಜಾರಿ ನಿರ್ದೇಶನಾಲಯ(ಈಡಿ)ದ ದುರ್ಬಳಕೆ ವಿರೋಧಿಸಿ ಇಂದು ನಗರದಲ್ಲಿ ಸಿಎಫ್ಐ ಕಾರ್ಯಕರ್ತರಿಂದ ಭಾರೀ ಆಕ್ರೋಶದ ಪ್ರತಿಭಟನೆ ನಡೆಯಿತು. ಪ್ರತಿಭಟನಕಾರರು ರವೂಫ್ ಶರೀಫ್ ರ ಬಿಡುಗಡೆಗೆ ಈ ವೇಳೆ ಒತ್ತಾಯಿಸಿದರು.

- Advertisement -

ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿಗೆ ಮುತ್ತಿಗೆ ಪ್ರತಿಭಟನೆ ಸಂಘಟನೆ ವತಿಯಿಂದ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟ ನಡೆಯಿತು.

ಕ್ಯಾಂಪಸ್ ಫ್ರಂಟ್ ರಾಜ್ಯ ನಾಯಕರಾದ ಇಮ್ರಾನ್ ಪಿ.ಜೆ., ಮುಹಮ್ಮದ್ ಸಾದಿಕ್ ಸೇರಿದಂತೆ ಹಲವನ್ನು ಪೊಲೀಸರು ಈ ವೇಳೆ ವಶಕ್ಕೆ ಪಡೆದಿದ್ದಾರೆ ಮತ್ತು ಬಿಡುಗಡೆಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Join Whatsapp