ಚೈತ್ರಾ ವಂಚನೆ ಪ್ರಕರಣ: ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್

Prasthutha|

ಮಂಗಳೂರು: ಬಿಜೆಪಿ ಟಿಕೆಟ್ ಗಾಗಿ ಡೀಲ್ ಮಾಡಿ ಬಿಜೆಪಿ ನಾಕನಿಗೆ ಕೋಟ್ಯಂತರ ವಂಚನೆ ಎಸಗಿದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೊಟೀಸ್ ನೀಡಿದ್ದಾರೆ. ಇನ್ನೆರಡು ದಿನಗಳಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ಸೂಚನೆ ನೀಡಿದ್ದಾರೆ.

- Advertisement -


ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ರೀನಾ ಸುವರ್ಣ ನೊಟೀಸ್ ನೀಡಿದ್ದಾರೆ. ಭಾರೀ ವಂಚನೆ ಪ್ರಕರಣದಲ್ಲಿ ಚೈತ್ರಾ ಅಂಡ್ ಗ್ಯಾಂಗ್ ಬೆಂಗಳೂರು ಸಿಸಿಬಿ ಪೊಲೀಸರ ಬಲೆಗೆ ಬಿದ್ದ ನಂತರ, ಚೈತ್ರಾ ಐಟಿ ಇಲಾಖೆಗೆ ಬರೆದಿದ್ದಾಳೆ ಎನ್ನಲಾದ ಪತ್ರವೊಂದು ಹೊರಬಂದು ವೈರಲ್ ಆಗಿತ್ತು. ಆ ಪತ್ರದಲ್ಲಿ ವಜ್ರದೇಹಿ ಮಠದ ಸ್ವಾಮೀಜಿ ಹೆಸರು ಇತ್ತು. ಆ ಬಗ್ಗೆ ಸ್ಪಷ್ಟನೆ ನೀಡಿದ್ದ ಸ್ವಾಮೀಜಿ, ತನಗೂ ಆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿದ್ದರು. ವಿಚಾರಣೆಗೆ ಸಿದ್ಧ ಎಂದು ಹೇಳಿದ್ದರು.



Join Whatsapp