Home ಟಾಪ್ ಸುದ್ದಿಗಳು ಚೈತ್ರಾ ವಂಚನೆ ಪ್ರಕರಣ: ಹಾಲಶ್ರೀಗೆ ಷರತ್ತುಬದ್ಧ ಜಾಮೀನು

ಚೈತ್ರಾ ವಂಚನೆ ಪ್ರಕರಣ: ಹಾಲಶ್ರೀಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಬಿಜೆಪಿ ನಾಯಕ ಹಾಗೂ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ಹಣ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಗ್ಯಾಂಗ್ ನ ಮೂರನೇ ಆರೋಪಿ ಅಭಿನವ ಹಾಲಶ್ರೀ ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಹಾಲಶ್ರೀ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕದಸ್ಯ ಪೀಠ ಷರತ್ತುಬದ್ಧ ಜಾಮೀನು ನೀಡಿದೆ.

ಬಂಧನ ತಪ್ಪಿಸಲು ನಾನಾ ಕಸರತ್ತು ಮಾಡಿ ಪಲಾಯನಗೈದಿದ್ದ ಅಭಿನವ ಹಾಲಶ್ರೀಯನ್ನು ಸೆಪ್ಟೆಂಬರ್‌ 19ರಂದು ಒಡಿಶಾದ ಕಟಕ್‌ನಲ್ಲಿ ಬಂಧಿಸಲಾಗಿತ್ತು.

ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ಸಂತ್ರಸ್ತ ಗೋವಿಂದಬಾಬು ಪೂಜಾರಿ ಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಹಾಲಶ್ರೀ ಗೆ ಜಾಮೀನು ಮಂಜೂರು ಮಾಡಿದೆ.

Join Whatsapp
Exit mobile version