ಚೈತ್ರಾ ಕುಂದಾಪುರ ವಂಚನೆ ಕೇಸ್: ಹಾಲಶ್ರೀ ಮಠದಲ್ಲಿ ಮಹಜರು

Prasthutha|

ವಿಜಯನಗರ: ಚೈತ್ರಾ ಕುಂದಾಪುರ ಮತ್ತು ತಂಡ ಎಸಗಿದ ವಂಚನೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಪ್ರಕರಣದ ಎ3 ಆರೋಪಿ ಹಾಲಶ್ರೀ ಸ್ವಾಮೀಜಿಯನ್ನು ಅರೆಸ್ಟ್ ಮಾಡಿದ ಸಿಸಿಬಿ ಪೊಲೀಸರು ಬುಧವಾರ ರಾತ್ರಿ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಗಡಗಲಿ ಮಠದಲ್ಲಿ ಮಹಜರು ನಡೆಸಿದ್ದಾರೆ.

- Advertisement -

ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಗಳ ಮಹಾಸಂಸ್ಥಾನ ಮಠದಲ್ಲಿ 2 ಗಂಟೆಗೂ ಹೆಚ್ಚು ಕಾಲ ಮಹಜರು ನಡೆಸಿದರು. ಮಠಕ್ಕೆ ಎಂಟ್ರಿಯಾಗುತ್ತಿದ್ದಂತೆ ತೆಂಗಿನಕಾಯಿ ಒಡೆದು ಸ್ವಾಗತ ಮಾಡಿದರು. ಮಠದ ಒಳಗೆ ಹೋಗುತ್ತಿದ್ದಂತೆ ಅಭಿನವ ಹಾಲಶ್ರೀ ಸ್ವಾಮೀಜಿಯನ್ನೊಬ್ಬರನ್ನೇ ರೂಂ ನೊಳಗೆ ಕರೆದುಕೊಂಡು ಹೋಗಿ ಮಹಜರು ಮಾಡಿದ್ದಾರೆ.

ಹಾಲಶ್ರೀ ಇರುತ್ತಿದ್ದ ರೂಂನೊಳಗೆ ಸಿಸಿಬಿ ಪೊಲೀಸರು ಕುಟುಂಬಸ್ಥರನ್ನು ಒಳಗಡೆ ಬಿಡದೆ ಹಾಲಶ್ರೀ ಜೊತೆಗೆ ಮಹಜರು ನಡೆಸಿದರು.

Join Whatsapp