‘ಚೈತ್ರಾ ಕುಂದಾಪುರ ಧೈರ್ಯವಂತೆ’: ಮುನ್ನಲೆಗೆ ಬಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್

Prasthutha|

ಉಡುಪಿ:  ವಿಧಾನಸಭೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಚೈತ್ರಾ ಕುಂದಾಪುರಳನ್ನು ಪೊಲೀಸರು ಬಂಧಿಸಿದ್ದಾರೆ. ಆಕೆಯ ಬಂಧನದ ನಂತರ ಆಕೆಯ ಒಂದೊಂದೇ ಅವಾಂತರಗಳು ಹೊರಬರುತ್ತಿದೆ.

- Advertisement -

ಆರೋಪಿ ಚೈತ್ರಾ ಕುಂದಾಪುರ ಕುರಿತು ಬಿಜೆಪಿಯ ಹಿರಿಯ ನಾಯಕಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಹಿಂದೆ ಮಾಡಿದ್ದ ಟ್ವೀಟ್ ಈಗ ವೈರಲ್ ಆಗಿದೆ.

ಕೇಂದ್ರ ಸಚಿವೆ ಮಾಡಿದ್ದ ಆ ಟ್ವೀಟ್ ನಿಂದ ಪ್ರವರ್ಧಮಾನಕ್ಕೆ ಬಂದಿದ್ದ ಚೈತ್ರಾ ಕುಂದಾಪುರ, ಆ ಬಳಿಕ ರಾಜ್ಯಾದ್ಯಂತ ತನ್ನ ಹವಾ ಕ್ರಿಯೇಟ್ ಮಾಡಿಕೊಂಡಿದ್ದಳು ಎಂದು ತಿಳಿದು ಬಂದಿದೆ.

- Advertisement -

2018ರಲ್ಲಿ ನಡೆದ ಕಾಂಗ್ರೆಸ್, ಎಡಪಕ್ಷಗಳ ಭಾರತ್ ಬಂದ್ ವಿರೋಧಿಸಿದ್ದ ಚೈತ್ರಾ ಕುಂದಾಪುರ, ಉಡುಪಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಜಗಳಕ್ಕಿಳಿದಿದ್ದಳು. ಅಂಗಡಿ, ಮುಂಗಟ್ಟು ಬಂದ್ ಮಾಡುವ ವೇಳೆ ರಸ್ತೆಗಿಳಿದು ತರಾಟೆಗೆ ತೆಗೆದುಕೊಂಡಿದ್ದಳು.

 2018 ರಲ್ಲಿ ನಡೆದ ಈ ಪ್ರತಿಭಟನೆ ವೇಳೆ ಚೈತ್ರಾ ಡೇರಿಂಗ್ ಕುರಿತು ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಟ್ವೀಟ್ ಮಾಡಿದ್ದರು. ಈ ಘಟನೆ ಕುರಿತ ವೀಡಿಯೋ ಒಂದನ್ನು ರೀಟ್ವೀಟ್ ಮಾಡಿ ಚೈತ್ರಾ ಕುಂದಾಪುರಳನ್ನು ‘ಡೇರಿಂಗ್ ಗರ್ಲ್’ ಎಂದಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ “ಪ್ರಧಾನಿ ಮೋದಿ ಮೇಲಿನ ನಂಬಿಕೆ ತೋರಿಸುವಲ್ಲಿನ ಈ ಯುವತಿಯ ಧೈರ್ಯ ಗಮನಾರ್ಹ” ಎಂದು ಹೇಳಿದ್ದರು.

ಜೊತೆಗೆ ನಿರ್ಮಲಾ ಸೀತರಾಮನ್ ಟ್ವೀಟ್ ನಿಂದ ತನಗೆ ಬಿಜೆಪಿಯ ಕೇಂದ್ರದ ಜೊತೆಗೆ ಲಿಂಕ್ ಇರುವುದಾಗಿ ಬಿಂಬಿಸಿಕೊಂಡಿದ್ದಳು. ಇದನ್ನೇ ಗೋವಿಂದ ಪೂಜಾರಿಗೆ ನಂಬಿಸಿ ಪಂಗನಾಮ ಹಾಕಿದ್ರು ಎನ್ನಲಾಗಿದೆ.

Join Whatsapp